May 18, 2024

Bhavana Tv

Its Your Channel

ವಾಕಿಂಗ್‌ಗೆ ಹೋಗಿದ್ದ ತಂದೆಗೆ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ ಮಗ.

ಬೆಳ್ತಂಗಡಿ: ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿಯೋರ್ವನ ಮಾರಕಾಸ್ತ್ರಗಳಿಂದ ದಾಳಿ ನಡೆದಿದ್ದೂ ,ತೀವ್ರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಅವರ ಮೇಲೆ ಅವರ ಮಗನೇ ದಾಳಿ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ನಗರದ ಪಂಚಾಯತ್ ವ್ಯಾಪ್ತಿಯ ಜ್ಯೂನಿಯರ್ ಕಾಲೇಜ್ ರಸ್ತೆ ಬಳಿಯ ನಿವಾಸಿ ಹಿರಿಯ ಚಾಲಕ ವಾಸು ಸಪಲ್ಯ (65) ಮಗನಿಂದ ಹಲ್ಲೆಗೆ ಒಳಗಾಗಿ ಮೃತಪಟ್ಟ ದುರ್ದೈವಿ. ವಾಸು ಮೂಲ್ಯ ವೃತ್ತಿಯಲ್ಲಿ ಟ್ಯಾಕ್ಸಿ ವಾಹನದ ಚಾಲಕರಾಗಿ ಕೆಲಸ‌ ಮಾಡುತ್ತಿದ್ದರು.

ಕಳೆದ ಕೆಲ ತಿಂಗಳುಗಳಿಂದ ಜಿಲ್ಲೆಯಲ್ಲಿ ಮಕ್ಕಳಿಂದಲೇ ಹೆತ್ತವರ ಮೇಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಅತೀಯಾಗಿ ಕಂಡು ಬರುತ್ತಿದೆ. ಇದು ಆ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದೆ.. ವಾಸು ಮೂಲ್ಯ ಅವರ ಎರಡನೇ ಮಗ ದಯಾನಂದ (38) ಈ ಕೃತ್ಯ ನಡೆಸಿರುವ ಆರೋಪಿಯಾಗಿದ್ದಾನೆ .

ಆರೋಪಿ : ದಯಾನಂದ್
ಮಗ ಕೂಡ ಚಾಲಕ ವೃತ್ತಿ ನಿರ್ವಹಿಸುತ್ತಿದ್ದು, ಮದ್ಯಪಾನ ಮಾಡಿ ತಂದೆ ಜೊತೆ ಗಲಾಟೆ ಅಗಿ ಈ ಹಿಂದೆ ಪ್ರಕರಣ ಠಾಣೆ ಮೆಟ್ಟಿಲೇರಿತ್ತು. ನಿನ್ನೆ ರಾತ್ರಿ ಮನೆಯಲ್ಲಿದ್ದ ಮಗ ದಯಾನಂದ ಇಂದು ಬೆಳಗ್ಗೆ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಬರುತ್ತಿರುವುದರಿಂದ ಅನುಮಾನ ಬಂದು ತನಿಖೆಯನ್ನು ಚುರುಕುಗೊಳಿಸಿದಾಗ ಪ್ರಕರಣ ಬಯಲಾಗಿದೆ.

ಕೃತ್ಯ ನಡೆದ ಸ್ಥಳ ಪರಿಶೀಲಿಸುತ್ತಿರುವ ಪೊಲೀಸರು
ದಯಾನಂದ್ ನಿಯಮಿತವಾಗಿ ಉದ್ಯೋಗ ಮಾಡದೆ ಕೆಲಸಗಳ್ಳನಂತೆ ತಿರುಗಾಟದಲ್ಲಿ ಜೀವನ ಕಳೆಯುತ್ತಿದ್ದು, ಜೊತೆಗೆ ಪ್ರತೀ ನಿತ್ಯ ಕುಡಿದು ಮನೆಯಲ್ಲಿ ರಂಪಾಟವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಇದರಿಂದ ತೀವೃವಾಗಿ ನೊಂದಿದ್ದ ವಸಂತ ಮೂಲ್ಯ ಆತನಿಗೆ ಪ್ರತಿ‌ನಿತ್ಯ ಬುದ್ಧಿವಾದವನ್ನು ಹೇಳುತ್ತಿದ್ದರು.

ತಂದೆಯ ಬುದ್ಧಿವಾದ ಮಗ ದಯಾನಂದನಿಗೆ ಹಿಡಿಸುತ್ತಿರಲಿಲ್ಲ ಹಾಗು ಇದೇ ವಿಚಾರವಾಗಿ ತಂದೆ ಮಗನ ನಡುವೆ ಜಗಳವೂ ಅಗುತ್ತಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ನಡುವೆ ಇಂದು ಮುಂಜಾನೆ ವಾಸು ಮೂಲ್ಯ‌ ವಾಕಿಂಗ್ ತೆರಳುವ ಸಂದರ್ಭಕ್ಕೆ ಕಾದು ಕುಳಿತಿದ್ದ ಪಾಪಿ ದಯಾನಂದ್ ಮಾರಕಾಸ್ತ್ರದಿಂದ ತಂದೆಯ ಮೇಲೆಯೇ ಹಲ್ಲೆ ನಡೆಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ಅಪ್ಪ ಚಡಪಡಿಸುವುದನ್ನು ನೋಡಿದ ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೃತ್ಯದ ಸ್ಥಳದಲ್ಲಿ ಪತ್ತೆಯಾಗಿರುವ ತಲಾವಾರು
ಘಟನೆ ನಡೆದ ಸ್ಥಳದಲ್ಲಿ ಕೃತ್ಯಕ್ಕೆ ಬಳಸಿದ ತಲವಾರ್ ಪತ್ತೆಯಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪಿಎಸ್ಐ ನಂದಕುಮಾರ್ , ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ. ಭೇಟಿ , ಪರೀಶೀಲನೆ ನಡೆಸಲಾಗುತ್ತಿದೆ

error: