May 19, 2024

Bhavana Tv

Its Your Channel

ಮರದಿಂದ ಕೆಳಗೆ ಬಿದ್ದು ಯುವಕನ ಸಾವು.

ನೆಲ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪ ಮರದ ಗೆಲ್ಲು ಕಡಿಯಲು ಮರ ಹತ್ತಿದ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟಿನಲ್ಲಿ ಸೆ.2ರಂದು ನಡೆದಿದೆ.
ಕೊಣಾಲು ಗ್ರಾಮದ ಕೋಲ್ಪೆ ದರ್ಖಾಸು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಇಸ್ಮಾಯಿಲ್(25)ಮೃತಪಟ್ಟ ಯುವಕ ಎನ್ನಲಾಗಿದೆ.
ಇಸ್ಮಾಯಿಲ್‌ರವರು ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ಎಂಬಲ್ಲಿ ಮಾವಿನ ಮರವೊಂದರ ಗೆಲ್ಲು ಕಡಿಯಲು ಮರ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ತಕ್ಷಣವೇ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ

error: