ಮಂಗಳೂರು; ನಗರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಎರಡು ಕಡೆ ಬೆಂಕಿ ಅವಘಡ ಸಂಭವಿಸಿದ್ದು ಘಟನೆಯಿಂದ ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಸಂಭವಿಸಿದೆ. ನಗರದ ಸಿ.ವಿ.ನಾಯಕ್ ಹಾಲ್ ಬಳಿಯ ಭುವನೇಂದ್ರ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮುಂಜಾನೆ ಪಾರ್ಕ್ ಮಾಡಲಾಗಿದ್ದ 5 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಲು ಸಹಕರಿಸಿದ್ದಾರೆ.
ಆದರೆ ಬೈಕ್ ಪಾರ್ಕಿಂಗ್ ಏರಿಯಾದಲ್ಲಿ ಅಗ್ನಿ ಅವಘಡ ಹೇಗೆ ಸಂಭವಿಸಿತ್ತು ಎಂದು ತಿಳಿದುಬಂದಿಲ್ಲ, ಈ ಘಟನೆಯಲ್ಲಿ ಒಟ್ಟು ಐದು ಬೈಕ್ ಗಳು ಬೆಂಕಿಗಾಹುತಿಯಾಗಿವೆ. ಬ್ಯಾಂಕ್ ಒಫ್ ಬರೋಡ ಹಂಪನ್ಕಟ್ಟ ಶಾಖೆಯಲ್ಲಿ ಬುಧವಾರ ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣ ಬೆಂಕಿ ನಡಿಸಿದ ಪರಿಣಾಮ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ