ಮಂಗಳೂರು : ತುಳು ಸಿನಿಮಾ ನಟನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಬಿ.ಸಿ.ರೋಡ್ ಸಮೀಪದ ಭಂಡಾರಿ ಬೆಟ್ಟುವಿನಲ್ಲಿರುವ ವಾಸ್ತಿ ಅಪಾರ್ಟ್ ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ವಾಸವಾಗಿದ್ದರು. ನಿನ್ನೆಯಿಂದಲೇ ಸುರೇಂದ್ರ ಬಂಟ್ವಾಳ್ ಅವರು ಕರೆಯನ್ನು ಸ್ವೀಕರಿಸುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿತ್ತು. ಬಂಟ್ವಾಳ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಅಪಾರ್ಟ್ ಮೆಂಟ್ ಒಳಗೆ ಪರಿಶೀಲಿಸಿದಾಗ ಸುರೇಂದ್ರ ಬಂಟ್ವಾಳ್ ಅವರ ಶವ ಪತ್ತೆಯಾಗಿದೆ.
ಯಾವ ಕಾರಣಕ್ಕೆ ಈ ಹತ್ಯೆ ನಡೆದಿದೆ ಅನ್ನೋದು ತಿಳಿದುಬಂದಿಲ್ಲ. ಸುರೇಂದ್ರ ಬಂಟ್ವಾಳ್ ಅವರಿಗೆ ತೀರಾ ಹತ್ತಿರದವರೇ ಈ ಕೃತ್ಯವನ್ನೆಸಗಿರಬಹುದು ಎಂದು ಶಂಕಿಸಲಾಗುತ್ತಿದೆ. ಈ ಹಿಂದೆ ಸುರೇಂದ್ರ ಬಂಟ್ವಾಳ್ ಅವರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಂಗ್ ಜಳಪಿಸಿ ಕುಖ್ಯಾತಿಯನ್ನು ಪಡೆದುಕೊಂಡಿದ್ದರು.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ