March 28, 2024

Bhavana Tv

Its Your Channel

ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ಮಂಗಳೂರು : ತುಳು ಸಿನಿಮಾ ನಟನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಬಿ.ಸಿ.ರೋಡ್ ಸಮೀಪದ ಭಂಡಾರಿ ಬೆಟ್ಟುವಿನಲ್ಲಿರುವ ವಾಸ್ತಿ ಅಪಾರ್ಟ್ ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ವಾಸವಾಗಿದ್ದರು. ನಿನ್ನೆಯಿಂದಲೇ ಸುರೇಂದ್ರ ಬಂಟ್ವಾಳ್ ಅವರು ಕರೆಯನ್ನು ಸ್ವೀಕರಿಸುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿತ್ತು. ಬಂಟ್ವಾಳ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಅಪಾರ್ಟ್ ಮೆಂಟ್ ಒಳಗೆ ಪರಿಶೀಲಿಸಿದಾಗ ಸುರೇಂದ್ರ ಬಂಟ್ವಾಳ್ ಅವರ ಶವ ಪತ್ತೆಯಾಗಿದೆ.
ಯಾವ ಕಾರಣಕ್ಕೆ ಈ ಹತ್ಯೆ ನಡೆದಿದೆ ಅನ್ನೋದು ತಿಳಿದುಬಂದಿಲ್ಲ. ಸುರೇಂದ್ರ ಬಂಟ್ವಾಳ್ ಅವರಿಗೆ ತೀರಾ ಹತ್ತಿರದವರೇ ಈ ಕೃತ್ಯವನ್ನೆಸಗಿರಬಹುದು ಎಂದು ಶಂಕಿಸಲಾಗುತ್ತಿದೆ. ಈ ಹಿಂದೆ ಸುರೇಂದ್ರ ಬಂಟ್ವಾಳ್ ಅವರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಂಗ್ ಜಳಪಿಸಿ ಕುಖ್ಯಾತಿಯನ್ನು ಪಡೆದುಕೊಂಡಿದ್ದರು.

error: