April 27, 2024

Bhavana Tv

Its Your Channel

ನೈನಾಪುರ ಗ್ರಾಮೀಣ ಪ್ರದೇಶ ಜನರಿಗೆ ಮಹತ್ತರವಾದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿ- ಶಾಸಕ ಕಳಕಪ್ಪ ಜಿ ಬಂಡಿ

ರೋಣ:ನೈನಾಪುರ ಗ್ರಾಮೀಣ ಪ್ರದೇಶ ಜನರಿಗೆ ಮಹತ್ತರವಾದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದು ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಜನಪ್ರಿಯ ಶಾಸಕರು ಕಳಕಪ್ಪ ಜಿ ಬಂಡಿ ಹೇಳಿದರು

ಕೇಂದ್ರ ಸರ್ಕಾರವು ಬಡವರ ದೀನ ದಲಿತರ ಅಭಿವೃದ್ದಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಬಡಜನರಿಗೆ ಉಚಿತವಾಗಿ ಗ್ಯಾಸ್ ಸಿಲೆಂಡರ್ ದೊರೆಯಬೇಕು ಎಂಬ ನಿಟ್ಟಿನಲ್ಲಿ ಉಜ್ವಲ್ ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಮನೆ ಇಲ್ಲದವರಿಗೆ ಮನೆ ನಿರ್ಮಾಣ ಮಾಡಿದೆ. ಬಡವರ ಅಭಿವೃದ್ದಿಯೆ ನಮ್ಮ ಪಕ್ಷದ ಮುಖ್ಯ ಗುರಿಯಾಗಿದೆ. ಮುಂದಿನ ದಿನಮಾನಗಳಲ್ಲಿ ಸರ್ಕಾರದಿಂದ ಹೆಚ್ಚುವರಿ ಅನುದಾನವನ್ನು ತಂದು ಗ್ರಾಮದಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಜನರಿಗೆ ಸಮರ್ಪಕವಾಗಿ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೆನೆ ಎಂದರು.
ಈ ಸಂದರ್ಭದಲ್ಲಿ ರೋಣ ಬಿಜೆಪಿ ಮಂಡಲ ಅಧ್ಯಕ್ಷ ಮುತ್ತು ಕಡಗದ ನಿಂಗಪ್ಪ ಕೆಂಗಾರ ಮುತ್ತಣ್ಣ ಲಿಂಗನಗೌಡ್ರ ಬಾಬು ಕುರಹಟ್ಟಿ ಊರಿನ ಎಲ್ಲಾ ಗ್ರಾಮಸ್ಥರು ಉಪಸ್ಥಿತರಿದ್ದರು

ವರದಿ ವೀರಣ್ಣ ಸಂಗಳದ ರೋಣ

error: