ರೋಣ ಮತಕ್ಷೇತ್ರದ ರಸ್ತೆಗಳ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಕೆ.ಜಿ.ಬಂಡಿ ಹೇಳಿದರು.
ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ ನೆರೆವೇರಿಸಿ ಮಾತನಾಡಿದರು, ರಸ್ತೆಗಳ ಸುಧಾರಣೆಯಿಂದ ಮಾತ್ರ ಗ್ರಾಮಗಳು ಅಭಿವೃದ್ದಿ ಹೊಂದುತ್ತವೆ. ಕ್ಷೇತ್ರದ ಪ್ರತಿ ಹಳ್ಳಿಗಳ ರಸ್ತೆಗಳ ಅಭಿವೃದ್ದಿಗೆ ಆದ್ಯತೆ ನೀಡಿ ಪಂಚಾಯತ್ ರಾಜ್ ಇಲಾಖೆ ಮುಗಳಿ ಯಿಂದ ರೋಣದವರಿಗೂ ಮತ್ತು ನೈನಾಪೂರ ಯಿಂದ ಹುನಗುಂಡಿವರಿಗೆ ಅಂದಾಜು ಮೊತ್ತ 80.ಲಕ್ಷ ರೂ ಅನುದಾನದಲ್ಲಿ ರಸ್ತೆ ಅಭಿವೃದ್ದಿ ಮಾಡಲಾಗುವುದು ಹಾಗೂ ಪ್ರಧಾನ ಮಂತ್ರಿ ಅವರು ಪ್ರತಿ ಹಳ್ಳಿಗಳ ರಸ್ತೆ ಸುಧಾರಣೆಯಾಗಬೇಕೆಂದು ಈ ಯೋಜನೆಯನ್ನು ತಂದಿದ್ದಾರೆ ಇದರಿಂದ ಅನೇಕ ಹಳ್ಳಿಗಳ ರಸ್ತೆಗಳು ಸುಧಾರಣೆಗೊಂಡು ಜನರಿಗೆ ಅನುಕೂಲಕರವಾಗಿವೆ, ಆದರಿಂದ ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು ಮತ್ತು ಗ್ರಾಮದ ಜನರು ಗುತ್ತಿಗೆದಾರರೊಂದಿಗೆ ಸಹಕರಿಸಿ ಒಳ್ಳೆಯ ರಸ್ತೆಯನ್ನು ನಿರ್ಮಾಣಕ್ಕೆ ಕೈಜೋಡಿಸಬೇಕು, ಇನ್ನು ಹೆಚ್ಚಿನ ಮಟ್ಟದಲ್ಲಿ ಅಭಿವೃದ್ದಿಗೆ ಒತ್ತು ನೀಡಿ ಅಭಿವೃದ್ದಿ ಮಾಡುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿಂಗಪ್ಪ ಕೆಂಗಾರ ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ, ಬಿಜೆಪಿ ರೋಣ ಮಂಡಲದ ಅಧ್ಯಕ್ಷ ಮುತ್ತಣ ಕಡಗದ, ಮಾಜಿ ಎಪಿಎಂಸಿ ಅಧ್ಯಕ್ಷರು ರಾಜಣ್ಣ ಹೂಲಿ, ಶಿವಾನಂದ ಜಿಡ್ಡಿಬಾಗಿಲ, ಅನೀಲ ಪಲ್ಲೇದ, ಬಸವಂತಪ್ಪ ತಳವಾರ ತಾ.ಪಂ ಇಓ ಸಂತೋಷ ಪಾಟೀಲ ಮುತಣ ತೊಗುಣಸಿ ಗ್ರಾ.ಪಂ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರಾದ ಮುಂತಾದವರು ಉಪಸ್ಥಿತರಿದ್ದರು.
ವರದಿ:ವೀರಣ್ಣ ಸಂಗಳದ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ