March 26, 2024

Bhavana Tv

Its Your Channel

ರಸ್ತೆ ಅಭಿವೃದ್ದಿಗೆ ಮೊದಲ ಆದ್ಯತೆ -ಕಳಕಪ್ಪ ಜಿ ಬಂಡಿ

ರೋಣ :ಮತಕ್ಷೇತ್ರದ ರಸ್ತೆಗಳ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಕೆ.ಜಿ.ಬಂಡಿ ಹೇಳಿದರು. ಅವರು ಸೋಮವಾರ ತಾಲೂಕಿನ ಇಟ್ಟಿಗಿ- ಹೊಸಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಯೋಜನೆ ಅಡಿಯಲ್ಲಿ .ಹೊಸಳ್ಳಿ -ಇಟಿಗಿ ಸಂಪರ್ಕಿಸುವ ರಸ್ತೆ ಅಭಿವೃದ್ದಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರೆವೇರಿಸಿ ಮಾತನಾಡಿದರು.

ರಸ್ತೆಗಳ ಸುಧಾರಣೆಯಿಂದ ಮಾತ್ರ ಗ್ರಾಮಗಳು ಅಭಿವೃದ್ದಿ ಹೊಂದುತ್ತವೆ. ಕ್ಷೇತ್ರದ ಪ್ರತಿ ಹಳ್ಳಿಗಳ ರಸ್ತೆಗಳ ಅಭಿವೃದ್ದಿಗೆ ಆದ್ಯತೆ ನೀಡಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 6 ಕಿ.ಮೀ ರಸ್ತೆ ಲೋಕೋಪಯೋಗಿ ಇಲಾಖೆ ಯೋಜನೆ ಅಡಿಯಲ್ಲಿ ಒಟ್ಟು 4.50 ಕೋಟಿ ಲಕ್ಷ ರೂ ಅನುದಾನದಲ್ಲಿ ರಸ್ತೆ ಅಭಿವೃದ್ದಿ ಮಾಡಲಾಗುವುದು ಹಾಗೂ ಪ್ರಧಾನ ಮಂತ್ರಿ ಅವರು ಪ್ರತಿ ಹಳ್ಳಿಗಳ ರಸ್ತೆ ಸುಧಾರಣೆಯಾಗಬೇಕೆಂದು ಈ ಯೋಜನೆಯನ್ನು ತಂದಿದ್ದಾರೆ ಇದರಿಂದ ಅನೇಕ ಹಳ್ಳಿಗಳ ರಸ್ತೆಗಳು ಸುಧಾರಣೆಗೊಂಡು ಜನರಿಗೆ ಅನುಕೂಲಕರವಾಗಿವೆ, ಆದರಿಂದ ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು ಮತ್ತು ಗ್ರಾಮದ ಜನರು ಗುತ್ತಿಗೆದಾರರೊಂದಿಗೆ ಸಹಕರಿಸಿ ಒಳ್ಳೆಯ ರಸ್ತೆಯನ್ನು ನಿರ್ಮಾಣಕ್ಕೆ ಕೈಜೋಡಿಸಬೇಕು, ಇನ್ನು ಹೆಚ್ಚಿನ ಮಟ್ಟದಲ್ಲಿ ಅಭಿವೃದ್ದಿಗೆ ಒತ್ತು ನೀಡಿ ಅಭಿವೃದ್ದಿ ಮಾಡುತ್ತೇವೆ ಎಂದು ಹೇಳಿದರು.

ಈ ವೇಳೆ ಬಿಜೆಪಿ ರೋಣ ಮಂಡಲದ ಅಧ್ಯಕ್ಷ ಮುತ್ತಣ್ಣ ಕಡಗದ ಸಂಗನಗೌಡ ಪಾಟೀಲ ಉಮೇಶ ಮಲಾಪುರ ಗ್ರಾಮ ಪಂಚಾಯತ್ ಅಧ್ಯಕ್ಷ, ಭೀಮವ್ವ ಕಂಬಳಿ ಸದಸ್ಯರಾದ ಎಂ ಎಸ್ ದೇಸಾಯಿ ರೇಣುಕಾ ಹವಾರಿ ,ದ್ರಾಕ್ಷಾಯಿಣಿ ಗೋದಿನನೂರು, ನಾಗರಾಜ ಸಜ್ಜನ್ ,ಬಸಯ್ಯ ಹಿರೇಮಠ ಸೇರಿದಂತೆ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು

ರದಿ ವೀರಣ್ಣ ಸಂಗಳದ

error: