ಕೊಡಗು: ಕೊಡ್ಲಿಪೇಟೆ ಕಂದಾಯ ಇಲಾಖೆಯ ಕಚೇರಿಯಲ್ಲಿನ ಆಧಾರ್ ಕಾರ್ಡ್ ಸೆಂಟರ್ (ಖಾಸಗಿ ಆಧಾರ್ ಕಾರ್ಡ್ ಸೆಂಟರ್ ) ನಲ್ಲಿ ಅತಿ ಹೆಚ್ಚು ಹಣ ಸುಲಿಗೆ ಮಾಡುತ್ತಿದ್ದಾರೆ ಇದರ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಿದ್ದರು.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿಯ ಕಂದಾಯ ಇಲಾಖೆಯ ನಾಡ ಕಚೇರಿಯಲ್ಲಿರುವ ( ಖಾಸಗಿ ಯವರಿಗೆ ಸರಕಾರದ ಬಿಲ್ಡಿಂಗ್ ಕೊಟ್ಟು ಆಧಾರ ಸೇವೆ ನಡೆಸುತ್ತಿದ್ದಾರೆ) ಆಧಾರ್ ಸೆಂಟರ್ ನಲ್ಲಿ ಮಕ್ಕಳಿಗೆ ಉಚಿತವಾಗಿ ಆಧಾರ್ ಕಾರ್ಡ್ ತೆಗೆಯಲು ಸರಕಾರದ ಆದೇಶವಿದ್ದರೂ ಈ ನಾಡ ಕಚೇರಿ ಇರುವ ಖಾಸಗಿ ಆಧಾರ್ ಕಾರ್ಡ್ ಸೆಂಟರ್ ನಲ್ಲಿ ೧ಮಗುವಿಗೆ ೧೫೦ ರೂಪಾಯಿಗಳಷ್ಟು ಹಣ ತೆಗೆದುಕೊಳ್ಳುತ್ತಿದ್ದಾರೆ ಮತ್ತು ಆಧಾರ್ ಕಾರ್ಡ್ ಗೆ ಮೊಬೈಲ್ ಫೋನ್ ನಂ. ಹಾಕಿಸಿ ಕೊಳ್ಳಬೇಕಾದರೆ ಇದಕ್ಕೂ ಸಹ ೧೫೦ ರುಪಾಯಿಗಳನ್ನು ತೆಗೆದು ಕೊಳ್ಳುತ್ತಿದ್ದಾರೆ .
ಕೊಡ್ಲಿಪೇಟೆಯಲ್ಲಿರುವ ನಾಡ ಕಚೇರಿಯಲ್ಲಿರುವ ಈ ಆಧಾರ್ ಕಾರ್ಡ್ ಸೆಂಟರ್ ನ ಕಂಪ್ಯೂಟರ್ ನಲ್ಲಿ ಆಪರೇಟರ್ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾಧಿಕಾರಿಗಳಿಗೆ ಮುಂದಿನ ದಿನಗಳಲ್ಲಿ ಕರವೇ ಕಾರ್ಯಕರ್ತರು ಖುದ್ದಾಗಿ ಹೋಗಿ ಆಧಾರ್ ಕಾರ್ಡ್ ಸೆಂಟರ್ ನಲ್ಲಿ ಅತಿ ಹೆಚ್ಚು ಹಣ ಪಡಿಸಿರುವ ಬಗ್ಗೆ ಖುದ್ದಾಗಿ ಹೋಗಿ ಮನವಿ ಸಲ್ಲಿಸಲಾಗುವುದು .
ಈ ಸಂದರ್ಭದಲ್ಲಿ ಕರವೇ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜಾ ಹಾಗೂ ಕರವೇ ಶನಿವಾರಸಂತೆ ಹೋಬಳಿ ಘಟಕದ ಉಪಾಧ್ಯಕ್ಷರಾದ ರಫೀಕ್ ಹಾಗೂ ಇನ್ನಿತರ ಕರವೇ ಕಾರ್ಯಕರ್ತರು ಭಾಗವಹಿಸಿದರು.
More Stories
ಅನಾಥ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೇರೆದ ಕರವೇ ಫ್ರಾನ್ಸಿಸ್ ಡಿಸೋಜಾ.
ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಬಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ
ಗೌಡಳ್ಳಿ ಗ್ರಾಮ ಪಂಚಾಯಿತಿ ಮುಂದೆ ಉದ್ಯಾನವನದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಶಿವರಾಮೇಗೌಡರ ಕರವೇ ಕಾರ್ಯಕರ್ತರಿಂದ ಮನವಿ