ಪಾಂಡವಪುರ; ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಲಸಿಕಾ ಕೇಂದ್ರದಲ್ಲಿ ವಿಕಲಚೇತನರಿಗೆ ಲಸಿಕೆ ಹಾಕಲಾಯಿತು, ಜೆಎಂಎಫ್ ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್.ವೇದಮೂರ್ತಿ ಚಾಲನೆ ನೀಡಿದರು. ಈ ವೇಳೆ ವಿಕಲಚೇತನರಿಗೆಲ್ಲರಿಗೂ ಮೊದಲ ಆಧ್ಯತೆಯಡಿ ಲಸಿಕೆ ನೀಡುವಂತೆ ನ್ಯಾಯಾಧೀಶರು ಸೂಚಿಸಿದರು.
ಪಾಂಡವಪುರದಲ್ಲಿ ೧೪೨ ಮಂದಿ ವಿಕಲಚೇತನರಿದ್ದು, ಈಗಾಗಲೇ ೧೦೦ ಮಂದಿಗೆ ಲಸಿಕೆ ನೀಡಿದ್ದು, ಇನ್ನೂ ೪೨ ಮಂದಿಗೆ ಲಸಿಕೆ ಹಾಕಬೇಕಾಗಿದೆ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಸ್.ಡಿ.ಮಂಜುನಾಥ್, ಆರೋಗ್ಯ ನಿರೀಕ್ಷಕ ಕೆ.ಕಾಳಯ್ಯ, ನ್ಯಾಯಾಲಯದ ಸಿಬ್ಬಂದಿ ಮಂಚಯ್ಯ ಇತರರಿದ್ದರು..
ವರದಿ..ಟಿ ಎಸ್ ಶಶಿಕಾಂತ್ ಶೆಟ್ಟಿ, ಮಂಡ್ಯ.. ಪಾಂಡವಪುರ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ