May 2, 2024

Bhavana Tv

Its Your Channel

ಪೆಟ್ರೋಲ್, ಡಿಸೇಲ್ ಅಡುಗೆ ಅನೀಲ ಬೆಲೆ ಏರಿಕೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.

ನಾಗಮಂಗಲ :ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ ₹ 100ರ ಗಡಿ ದಾಟಿರುವುದನ್ನು ವಿರೋಧಿಸಿ ಶನಿವಾರ ಕಾಂಗ್ರೆಸ್ ಘಟಕದ ನಾಯಕರು ಹಾಗೂ ಕಾರ್ಯಕರ್ತರು ಪಟ್ಟಣದ
ಪೆಟ್ರೋಲ್‌ ಬಂಕ್‌ಗಳ ಎದುರು ‘ಪೆಟ್ರೋಲ್‌ 100 ನಾಟೌಟ್‌’ ಪ್ರತಿಭಟನಾ ಪ್ರದರ್ಶನ ನಡೆಸಿದರು.

‘ ನಾಗಮಂಗಲತಾಲ್ಲೂಕುಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಸಿಲಿಂಡರ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರು ಗತಿಯಲ್ಲೇ ಸಾಗಿದೆ.ಕೇಂದ್ರವು ಕೋವಿಡ್‌ ಸಂಕಷ್ಟದಲ್ಲಿರುವ ಜನಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ’ ಎಂದು ಕಾಂಗ್ರೆಸ್ ತಾಲ್ಲೂಕು ಮಾಜಿ ಅಧ್ಯಕ್ಷರಾದ ಕೃಷ್ಣಗೌಡರುರವರು ಕಿಡಿಕಾರಿದರು.

ಈ ಸಂದರ್ಭದಲ್ಲಿ ತುಪ್ಪದ ಗ್ರಾಮ ಪಂ ಅಧ್ಯಕ್ಷ ರಘು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಜೇಶ್ ಹನುಮಂತ ಶರತ್ ರಾಮಣ್ಣ ಹಾಗೂವಸಂತ ಮಣಿಯವರು. ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಡಿ.ಆರ್ .ಜಗದೀಶ್ ನಾಗಮಂಗಲ

error: