ದೇವಲಾಪುರ..ಮನೆಮನೆಗೆ ಕುಡಿಯುವ ನೀರಿನ ಯೋಜನೆಯನ್ನು ಮಾನ್ಯ ಮಾಜಿ ಪ್ರಧಾನಿಗಳಾದ ದೇವೇಗೌಡರ ಮಾರ್ಗದರ್ಶನ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಮನೆಮನೆಗೆ ಕುಡಿಯುವ ನೀರಿನ ಯೋಜನೆಯನ್ನು ಚಾಲನೆಗೆ ನೀಡುವ ಮುಖಾಂತರ ಮಂಡ್ಯ ಜಿಲ್ಲೆಗೆ ಪ್ರಥಮ ಆದ್ಯತೆ ನೀಡಿದ ಕೊಡುಗೆ ಅವರದ್ದು ಎಂದು ಶಾಸಕ ಸುರೇಶ್ ಗೌಡ ತಿಳಿಸಿದರು .
ಅವರಿಂದು ದೇವಲಾಪುರ ಹೋಬಳಿಯ ದೇವರಮಾದಹಳ್ಳಿ ಗ್ರಾಮದಲ್ಲಿ ಶ್ರೀಮತಿ ನಂಜಮ್ಮ ಹಾಗೂ ನರಸಿಂಹಯ್ಯನವರ ಸ್ಮರಣಾರ್ಥ ಅವರ ಹೆಸರಿನಲ್ಲಿ ನೂತನವಾಗಿ ಶುದ್ಧ ನೀರು ಘಟಕವನ್ನು ಉದ್ಘಾಟನೆ ಮಾಡುತ್ತಾ ಪ್ರಸ್ತುತ ಪ್ರತಿ ಮನೆ ಮನೆಗೂ ಕುಡಿಯುವ ನೀರಿನ ಯೋಜನೆಯನ್ನು ದೇವೇಗೌಡರು ಮಾರ್ಗದರ್ಶನದೊಂದಿಗೆ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿಯವರು ಚಾಲನೆ ಮಾಡಿದ್ದು ಮಂಡ್ಯ ಜಿಲ್ಲೆಗೆ ಪ್ರಥಮ ಆದ್ಯತೆ ನೀಡುವ ಮುಖಾಂತರ ಯೋಜನೆಗೆ ಚಾಲನೆ ದೊರೆತಿದ್ದು ಇದರಿಂದ ಪ್ರತಿಯೊಬ್ಬರು ಸ್ವಲ್ಪ ದಿನಗಳ ನಂತರ ಕುಡಿಯುವ ನೀರಿನ ಯೋಜನೆ ಸಾಕಾರಗೊಳ್ಳುವುದೆಂತು ತಿಳಿಸಿದರು.
ನನ್ನ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಆಗುವ ಕೆಲಸಗಳು ಸಾಗುತ್ತಿದ್ದು ಪೂರ್ಣಪ್ರಮಾಣದಲ್ಲಿ ಆಗಿದೆ ಎಂದು ಹೇಳುವುದಿಲ್ಲ ಆಗಬೇಕಾದ ಕೆಲಸಗಳು ಹಂತಹAತವಾಗಿ ಮಾಡುವ ಭರವಸೆ ನೀಡುತ್ತಾ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ವಾಗಿದ್ದು ತಮಗೆಲ್ಲ ಗೊತ್ತಿರುವ ವಿಚಾರವಾಗಿದ್ದು ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆAದು ಇದೇ ಸಂದರ್ಭದಲ್ಲಿ ತಿಳಿಸಿದರು
ಸರ್ಕಾರದ ಯೋಜನೆಗಳನ್ನು ಪ್ರತಿಗ್ರಾಮಪಂಚಾಯತಿ ಮಟ್ಟದಲ್ಲಿ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕರಿಗೆ ಸವಲತ್ತುಗಳ ಸಿಗುವ ಯೋಜನೆಯ ಬಗ್ಗೆ ಸದುಪಯೋಗಪಡಿಸಿಕೊಳ್ಳುವಂತೆ ಜನರಿಗೆ ಮುಟ್ಟುವಂತೆ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರತಿಯೊಬ್ಬರು ಬದ್ಧವಾಗಿರಬೇಕು ಎಂದು ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಅಪ್ಪಾಜಿಗೌಡ ರವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕರಾದ ಕೋಟಿರವಿ. ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಯೋಗೇಶ್ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ನರಸಿಂಹಮೂರ್ತಿ ಸಿ.ಜೆ ಕುಮಾರ್ ರವರುಗಳು ಮಾತನಾಡಿದರು.
ಇದೇ ವೇಳೆಯಲ್ಲಿ ನೂತನ ನೀರಿನ ಘಟಕದ ಪ್ರಾಯೋಜಕರಾದ ರಾಜಣ್ಣನವರು ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ್ ಸವಿತಾ ಬಸವರಾಜು.ದೇವರಾಜು. ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಿತೀಶ್ ಹಾಜರಿದ್ದರು
ವರದಿ: ದೇವಲಾಪುರ ಜಗದೀಶ್ ನಾಗಮಂಗಲ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ