![](https://kannada.bhavanatv.com/wp-content/uploads/2020/04/vlcsnap-2020-04-04-20h20m24s330.png?v=1586020271)
ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಾಗರಿಕ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇಡೀ ವಿಶ್ವವನ್ನೇ ಬೆಂಬಿಡದ ಭೂತದಂತೆ ಕಾಡುತ್ತಿರುವ ಕೊರೋನಾ ಅಟ್ಟಹಾಸದ ತಡೆಗೆ ನಾಗರಿಕರು ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಪಾಲಿಸಬೇಕು. ಕೊರೋನಾ ಸೂಕ್ಷ್ಮ ವೈರಾಣುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರೋಗನಿರೋಧಕ ಶಕ್ತಿಯನ್ನು ಹೊಂದಿರುವ ಹೈಡ್ರೋಕ್ಲೋರಿನ್ ದ್ರಾವಣವನ್ನು ರೋಬೋಟ್ ಮೂಲಕ ಸಿಂಪಡಿಸಲಾಗುತ್ತಿದೆ ಎಂದು ರೈತವಿಜ್ಞಾನಿಯಾದ ರೋಬೋ ಮಂಜೇಗೌಡ ವಿವರಿಸಿದರು.
ಸಾರ್ವಜನಿಕರು ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ತಡೆಯಲು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿ, ಕೈಗಳನ್ನು ಆಗಾಗ್ಗೆ ಸ್ಯಾನಿಟೈಸರ್ ನಿಂದ ತೊಳೆದುಕೊಂಡು ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಏಪ್ರಿಲ್ -೧೪ರವರೆಗೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಕೈಮುಗಿದು ಮನವಿ ಮಾಡಿದರು.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ