May 17, 2024

Bhavana Tv

Its Your Channel

ಡಿ.೨೫ ಕ್ಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೧- ೨೨ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೧- ೨೨ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಡಿ.೨೫ ನೇ ಶನಿವಾರದೊಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಕೆ.ಬಿ ಶೇಖರ್ ರವರು ತಿಳಿಸಿದರು

ರಾಜ್ಯದಲ್ಲೇ ಮೂರನೇ ಸ್ಥಾನದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಅಭಿವೃದ್ಧಿ ಬಗ್ಗೆ ಹಲವಾರು ವಿಚಾರಗಳು ಚರ್ಚೆ ಆಗಲಿದ್ದು ಈಗಾಗಲ್ಲೇ ಎಲ್ಲಾ ಶೇರುದಾರರಿಗೆ ಪೋಷ್ಟ್ ಮೂಲಕ ಆಹ್ವಾನ ಪತ್ರಿಕೆಯನ್ನು ಕಳಿಸಿಲಾಗಿದ್ದು. ತಲುಪದೇ ಇದ್ದ ಶೇರುದಾರರು ಇದನ್ನೇ ಆಹ್ವಾನ ಎಂದು ತಿಳಿದು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿ ಮಾಡಿಕೊಡಬೇಕೆಂದು ಮಾಧ್ಯಮದ ಮೂಲಕ ಕಿಕ್ಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಬಿ ಶೇಖರ್ ಮನವಿ ಮಾಡಿದರು.

ವರದಿ: ಶಂಭು ಕಿಕ್ಕೇರಿ

error: