ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಲೋಕಾಯನ ಕಲ್ಚರಲ್ ಫೌಂಡೇಶನ್ ವತಿಯಿಂದ ಆರಂಭಗೊAಡ ತಿಳುವಿನ ತಾಣ ಎಂಬ ಗ್ರಂಥಾಲಯಕ್ಕೆ ಓದುಗರ ಆಹ್ವಾನ ಕಾರ್ಯಕ್ರಮದಲ್ಲಿ ಪ್ರತಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಗನ್ನು ಆಹ್ವಾನಿಸಲಾಯಿತು
ಖ್ಯಾತ ರಂಗಕರ್ಮಿಗಳಾದ ಶಶಿಧರ್ ಭಾರಿಘಾಟ್, ಯುವ ಸಾಹಿತಿಗಳಾದ ಮಹಮ್ಮದ್ ಅಜರುದ್ದೀನ್ ಮತ್ತು ಗಗನ್ ಜಿ ಗೌಡ ಇವರು ಇದು ಅಕ್ಕಿಹೆಬ್ಬಾಳು ಹೋಬಳಿಯ ಪ್ರಮುಖ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಗ್ರಂಥಾಲಯಕ್ಕೆ ಬಂದು ಪುಸ್ತಕ ಓದಿ ಎಂಬ ಅಭಿಯಾನದ ಅಡಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂಬ ಸಂದೇಶವನ್ನು ಸಾರಿದರು.
ವಿದ್ಯಾರ್ಥಿಗಳು ಜ್ಞಾನವನ್ನು ಪಡೆಯಲು ಹೆಚ್ಚಿನ ಪುಸ್ತಕಗಳನ್ನು ಓದಬೇಕು. ಗ್ರಂಥಾಲಯಗಳ ಸದುಪಯೋಗ ಪಡೆದುಕೊಂಡು ಉತ್ತಮ ಜ್ಞಾನವನ್ನು ಸಂಪಾದನೆ ಮಾಡಬೇಕು.ಜ್ಞಾನವನ್ನು ಪಡೆದುಕೊಳ್ಳಬೇಕು ಎಂಬ ಸಂದೇಶದ ಮೂಲಕ ಎಲ್ಲಾ ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ಬಂದು ಪುಸ್ತಕಗಳನ್ನು ಓದಿ ಎಂದು ಆಹ್ವಾನ ಕೊಟ್ಟರು. ಪುಸ್ತಕ ಓದುವ ಹವ್ಯಾಸ ಇಟ್ಕೊಳ್ಳಿ ಎಂಬ ವಿಶೇಷ ಅಭಿಯಾನದ ಮೂಲಕ ಎಲ್ಲರಿಗೂ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ರಂಗಕರ್ಮಿ ಗಳಾದ ಶಶಿಧರ್ ಭಾರಿಘಾಟ್, ಯುವ ಸಾಹಿತಿಗಳಾದ ಮೊಹಮ್ಮದ್ ಅಜರುದ್ದೀನ್, ಗಗನ್ ಹಾಗೂ ಶಾಲಾ ಕಾಲೇಜಿನ ಮುಖ್ಯ ಶಿಕ್ಷಕರು ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ಶಂಭು ಕಿಕ್ಕೇರಿ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ