ಕಿಕ್ಕೇರಿ: ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಅನುಗ್ರಹ ಫೌಂಡೇಶನ್ ಮೈಸೂರು ಇವರು ವಿಶೇಷ ಆಸಕ್ತಿ ವಹಿಸಿ ತಾಲ್ಲೂಕಿನ ಬಂಡಿಹೊಳೆ ಗ್ರಾಮದ ಶಾಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು ತಿಳಿಸಿದರು
ಅವರು ಕೃಷ್ಣರಾಜಪೇಟೆ ತಾಲೂಕಿನ ಕಸಬಾ ಹೋಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಡಿಹೊಳೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಗೆ ಬೆಂಚುಗಳು ಲ್ಯಾಪ್ ಟಾಪ್ ಮುಂತಾದುವುಗಳನ್ನು ವಿತರಿಸಿ ಮಾತನಾಡಿದರು.
ಗ್ರಾಮದ ಯುವಕ ಪ್ರವೀಣ್ ಚಕ್ರವರ್ತಿ ಅನುಗ್ರಹ ಫೌಂಡೇಶನ ವಿಜಯರಾಜ್ ಮತ್ತು ಶಿವಶಂಕರ್ ರವರ ವಿಶೇಷ ಆಸಕ್ತಿಯಿಂದಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗುಡಿಸಲಿನಲ್ಲಿ ವಾಸ ಮಾಡಿ ಇಂಜಿನಿಯರಿAಗ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಂಡಿಹೊಳೆಯ ಗ್ರಾಮದ ಪ್ರವೀಣ್ ಚಕ್ರವರ್ತಿ ಮತ್ತು ಅನುಗ್ರಹ ಪೌಂಡೇಶನ ವಿಜಯರಾಜ್ ಮತ್ತು ಶಿವಶಂಕರ್ ವೈಯಕ್ತಿಕವಾಗಿ ಲ್ಯಾಪ್ ಟಾಪ್ ಗಳನ್ನು ನೀಡಿ ವಿದ್ಯಾಭ್ಯಾಸ ಸುಗಮವಾಗಿ ಸಾಗಲು ಅನುಕೂಲ ಮಾಡಿಕೊಡಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಅಶೋಕ್,ಅನುಗ್ರಹ ಫೌಂಡೇಶನ್ ಅಧ್ಯಕ್ಷ ಅಣ್ಣೇಗೌಡ,ಪುರಸಭೆ ಮಾಜಿ ಸದಸ್ಯ ಹರಪ್ರಸಾದ್, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ಶಿಕ್ಷಣ ಸಂಯೋಜಕರಾದ ವೇಣುಗೋಪಾಲ್, ನೀಲಾಮಣಿ, ಮೋಹನ್, ಸಿ.ಆರ್.ಪಿ ಧನೇಂದ್ರ , ಉಪನ್ಯಾಸಕ ಆರ್.ಬಿ.ಪದ್ಮನಾಭ, ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್, ಗ್ರಾಪಂ ಸದಸ್ಯ ದರ್ಶನ್, ಹಾಗೂ ಊರಿನ ಮುಖಂಡರಾದ ಸಣ್ಣರಾಮೇಗೌಡ,ರಾಜಶೇಖರ್,ಕಾಯಿಮಂಜೇಗೌಡ ಮುಖ್ಯ ಶಿಕ್ಷಕ ಮತ್ತು ಸಹಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ ಶಂಭು ಕಿಕ್ಕೇರಿ.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ