ಪಾಂಡವಪುರ:– ಕೇಂದ್ರ ಸರ್ಕಾರದ ಅನುಷ್ಠಾನದಂತೆ ಇಂದು ಪಾಂಡವಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಶಾಸಕರಾದ ಸಿ ಎಸ್ ಪುಟ್ಟರಾಜು ರವರು ಲಸಿಕಾಕರಣ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಸಕರಾದ ಪುಟ್ಟರಾಜುರವರು ಮಾತನಾಡಿ ಮೊದಲ ಹಂತದಲ್ಲಿ 6200 ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡುತ್ತಿದ್ದೇವೆ. ನಂತರ ದುದ್ದ ಹೋಬಳಿ ಹಾಗೂ ಇನ್ನು ಉಳಿದ ತಾಲೂಕು ಶಾಲಾ ಮಕ್ಕಳಿಗೆ ನೀಡಲಾಗುತ್ತದೆ ಹೆಂದು ತಿಳಿಸಿದರು…
ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ತಾಲೂಕು ಆರೋಗ್ಯ ಅಧಿಕಾರಿ ಅರವಿಂದ್, ಪಾಂಡವಪುರ ಸಾರ್ವಜನಿಕ ಆಸ್ಪತ್ರೆ ಮುಖ್ಯಸ್ಥರು ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಮಹೇಶ್, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಹಾಗೂ ಶಾಲಾ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು
ವರದಿ:-ಟಿ ಎಸ್ ಶಶಿಕಾಂತ್ ಮಂಡ್ಯ…
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ