May 3, 2024

Bhavana Tv

Its Your Channel

ಹೊಡಕಹಳ್ಳಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಲಕ್ಷ್ಮಮ್ಮ ಮಂಜುನಾಥ ಆಯ್ಕೆ

ಕೃಷ್ಣರಾಜಪೇಟೆ ತಾಲ್ಲೂಕಿನ ಹೊಡಕಹಳ್ಳಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನೂತನ ಅದ್ಯಕ್ಷರಾಗಿ ಲಕ್ಷ್ಮಮ್ಮ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು

ಸಹಕಾರ ಸಂಘದ ಅದ್ಯಕ್ಷರ ಸ್ಥಾನ ಖಾಲಿ ಇದ್ದ ಹಿನ್ನೆಲೆ ಇಂದು ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಹೊಡಕಹಳ್ಳಿ ಗ್ರಾಮದ ಲಕ್ಷ್ಮಮ್ಮ ಮಂಜುನಾಥ್ ಹೊರತು ಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿ ನಾಗಭೂಷಣ ರವರು ಲಕ್ಷ್ಮಮ್ಮ ರವರನ್ನು ಸಹಕಾರ ಸಂಘದ ನೂತನ ಅಧ್ಯಕ್ಷರೆಂದು ಘೋಷಿಸಿದರು.

ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನಿರ್ದೇಶಕರಾದ ರಾಧಮ್ಮ, ಪಾರ್ವತಿ, ನಾಗಮ್ಮ, ಪಾರ್ವತಮ್ಮ, ಜಯಲಕ್ಷ್ಮಿ, ರತ್ನಮ್ಮ, ಪುಟ್ಟಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಸವಿತ, ನಂದಿನಿ, ಕಮಲಮ್ಮ, ಕಾರ್ಯದರ್ಶಿ ಕುಮಾರಿ ಸೇರಿದಂತೆ ಗ್ರಾಮಸ್ಥರುಗಳು ಇದ್ದರು.

ನಂತರ ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಕೋಟೇಗೌಡ್ರು ಮಾತನಾಡಿ ನೂತನ ಅಧ್ಯಕ್ಷರಿಗೆ ಶುಭಕೋರಿ ಸಂಘದ ಅಭಿವೃದ್ಧಿ ಶ್ರಮಿಸುವಂತೆ ಉನ್ನತ ಮಟ್ಟಕ್ಕೆ ಸಂಘವನ್ನು ಕೊಂಡೊಯ್ಯವAತೆ ಕಿವಿಮಾತು ತಿಳಿಸಿದರು..

ವರದಿ:ಶಂಭು ಕಿಕ್ಕೇರಿ

error: