April 29, 2024

Bhavana Tv

Its Your Channel

ಸಂಕಷ್ಟದಲ್ಲಿ ಸಿಲುಕಿದ ರೈತ ಕುಟುಂಬಕ್ಕೆ ಆಸರೆಯಾದ ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಜೆ.ಡಿ.ಎಸ್ ಪಕ್ಷದ ನಾಯಕ ಬಿ.ಎಂ ಕಿರಣ್

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ರೈತ ಮಲ್ಲೇಶ್ ಎಂಬುವವರು ತೆಂಗಿನ ಮರದಿಂದ ಕಾಯಿ ಕೀಳಲು ಹೋಗಿ ಮರದಿಂದ ಬಿದ್ದು ಎದೆ ಭಾಗದ ಮೂಳೆಗಳು ಮುರಿದು ಹೋಗಿದ್ದ ರೈತನ ಮನೆಗೆ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು. ಅಲ್ಲದೆ ಜೀವನಾಧಾರಕ್ಕೆ ಕಷ್ಟವಾಗಿದ್ದ ಕುಟುಂಬಕ್ಕೆ ಕೈಲಾದಷ್ಟು ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ..

ಈ ಸಂದರ್ಭದಲ್ಲಿ ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷರಾದ ಕಾಯಿ ಮಂಜೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಯಿ ಸುರೇಶ್, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಕೋಡಿಮರನಹಳ್ಳಿ ಮಂಜೇಗೌಡ, ಗ್ರಾಮ ಪಂಚಾಯತಿ ಸದಸ್ಯ ಬಾಲಕೃಷ್ಣ ಮುಖಂಡರಾದ ದಬ್ಬೇಘಟ್ಟ ಬಾಲು, ಬೇಕರಿ ಮಂಜು, ಅಂಕನಹಳ್ಳಿ ಮಂಜೇಗೌಡ, ಸೇರಿದಂತೆ ಮತ್ತಿತ್ತರರು ಇದ್ದರು..

ವರದಿ ಶಂಭು ಕಿಕ್ಕೇರಿ

error: