May 18, 2024

Bhavana Tv

Its Your Channel

ಆನೆಗೊಳ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ನಾಗಮ್ಮ ಮಂಜೇಗೌಡ ಅವಿರೋಧ ಆಯ್ಕೆ

ಕೃಷ್ಣರಾಜಪೇಟೆ ತಾಲ್ಲೂಕಿನ ಗಡಿಭಾಗವಾಗ ಆನೆಗೊಳ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನ ತೆರವಾಗಿದ್ದ ಹಿನ್ನೆಲೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ನಾಗಮ್ಮ ಮಂಜೇಗೌಡ ರವರನ್ನು ಎಲ್ಲಾ ಸರ್ವ ಸದಸ್ಯರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು..

ನೂತನ ಉಪಾಧ್ಯಕ್ಷರಿಗೆ ಸನ್ಮಾನಿಸಿ ಸಿಹಿ ತಿನ್ನಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿ ಗ್ರಾಮಸ್ಥರು ಶುಭ ಹಾರೈಸಿದರು. ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕರಾದ ಬಿ.ಎಸ್ ಮಂಜುನಾಥ್, ಪ್ರಥಮ ದರ್ಜೆ ಗುತ್ತಿಗೆದಾರರಾದ ಪರ್ವತ್ ರಾಜ್, ಮುಖಂಡರಾದ ಚಿಕ್ಕತರಹಳ್ಳಿ ರಾಮಕೃಷ್ಣೇಗೌಡ ಮಾತನಾಡಿ ಎಲ್ಲಾ ಸರ್ವ ಸದಸ್ಯರ ಸಹಕಾರ ಪಡೆದುಕೊಂಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ
ಕೆಲಸಗಳತ್ತ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು

ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಚಿಕ್ಕತರಹಳ್ಳಿ ಮಧು, ಮುಖಂಡರಾದ ಶಿಶುಪಾಲು, ವಿಶ್ವನಾಥ್, ಗ್ರಾಮ ಪಂಚಾಯತಿ ಸದಸ್ಯರುಗಳಾದ ಅನುಸೂಯಾ , ಜಗನ್ನಾತ್, ಧನಲಕ್ಷ್ಮಿ , ರುಕ್ಮಣಿ , ನಂಜೇಶ್, ರಂಜಿತ, ರಕ್ಷಿತ್,ಪ್ರಕಾಶ್, ಗಂಗಾಧರ್, ಯೋಗೇಶ್,ಭಾಗ್ಯಮ್ಮ, ಮಂಜುಶೆಟ್ಟಿ, ಲಕ್ಷ್ಮಿ, ರಮೇಶ್,ಮಹಾಲಕ್ಷ್ಮಿ, ಕುಮಾರಿ ಸರೇದಂತೆ ಗ್ರಾಮದ ಮುಖಂಡರುಗಳು ಇದ್ದರು..

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

error: