ಕಿಕ್ಕೇರಿ: ದಕ್ಷಿಣ ಪದವೀಧರ ಕ್ಷೇತ್ರದ ಜೆ.ಡಿ.ಎಸ್ ಅಭ್ಯರ್ಥಿ ಪರ ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷರು ಹಾಗೂ ಜೆ ಡಿ ಎಸ್ ಪಕ್ಷದ ಯುವ ನಾಯಕರು ಆದ ಬಿ.ಎಂ ಕಿರಣ್ ನೇತೃತ್ವದಲ್ಲಿ ಸ್ಥಳಿಯ ಶಾಲೆಗಳಿಗೆ, ಹಾಗೂ ಕಾಲೇಜುಗಳಿಗೆ ಭೇಟಿ ನೀಡಿ ಮತ ಯಾಚನೆ ಮಾಡಿದರು
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಎಲ್ಲಾ ಸರ್ಕಾರಿ ಪ್ರೌಡ ಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವು ಶಾಲೆಗಳಿಗೆ ಭೇಟಿ ನೀಡಿ ವಿಧಾನ ಪರಿಷತ್ ಚುನಾಣೆಯ ದಕ್ಷಿಣ ಪದವೀಧರ ಕ್ಷೇತ್ರದಿಂದ ಸ್ಪರ್ದೆ ಮಾಡಿರುವ ಹೆಚ್ ಕೆ ರಾಮು ರವರು ಪರ ಬಿರುಸಿನ ಪ್ರಚಾರ ನಡೆಸಿದರು
ನಂತರ ಮಾತನಾಡಿ ಈಗಾಗಲೇ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಅಲ್ಲದೆ ಹಲವು ಕ್ಷೇತ್ರಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ರಾಮು ರವರಿಗೆ ತಮ್ಮ ಮತಗಳನ್ನು ನೀಡಿ ಗೆಲ್ಲಿಸುವ ಮೂಲಕ ತಮ್ಮ ಸೇವೇ ಮಾಡಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು
ಈ ಸಂದರ್ಭದಲ್ಲಿ ಜೆ.ಡಿ.ಎಸ್ ಹೋಬಳಿ ಘಟಕದ ಅಧ್ಯಕ್ಷರಾದ ಕಾಯಿ ಮಂಜೇಗೌಡ್ರು, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಚೌಡೇನಹಳ್ಳಿ ಶಂಭು, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ಶಿಕ್ಷಕಾರದ ಬೋರೇಗೌಡ್ರು, ಜಮ್ಮಿಂದ್ದಾರ್ ಮಂಜು ಸೇರಿದಂತೆ ಮತ್ತಿತ್ತರರು ಇದ್ದರು..
ವರದಿ:- ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ