ಮಂಡ್ಯ ಜಿಲ್ಲಾ ಪಂಚಾಯತ್ ಮಾಜಿ ಉಪಾದ್ಯಕ್ಷರಾದ ಕೆ ಎಸ್ ಪ್ರಭಾಕರ್ ಹುಟ್ಟು ಹಬ್ಬವನ್ನು ಶಾಲಾ ಮಕ್ಕಳೊಂದಿಗೆ ಸರಳವಾಗಿ ಆಚರಣೆ ಮಾಡಿಕೊಂಡರು
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಟೈಗರ್ ಎಂದೇ ಗುರುತಿಸಿಕೊಂಡಿರುವ ಬಿ.ಜೆ.ಪಿ ಪಕ್ಷದ ಹಿರಿಯ ನಾಯಕರು ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಕೆ.ಎಸ್ ಪ್ರಭಾಕರ್ ರವರ ಹುಟ್ಟು ಹಬ್ಬದ ಅಂಗವಾಗಿ ಕರ್ನಾಟಕ ಪಬ್ಲೀಕ್ ಶಾಲೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಿಕೊಂಡರು.
ನAತರ ಟೈಗರ್ ಕೆ.ಎಸ್ ಪ್ರಭಾಕರ್ ಅಭಿಮಾನಿ ಬಳಗದ ಸದಸ್ಯರುಗಳು ಮಾತನಾಡಿ ಕಿಕ್ಕೇರಿ ಪಟ್ಟಣದ ಅಭಿವೃದ್ಧಿಗಾಗಿ ಸುಮಾರು 40 ವರ್ಷದಿಂದ ಜನರ ಸೇವೆಮಾಡುತ್ತಾ, ಜನರ ಮನದಲ್ಲಿ ಉಳಿದಿರುವ ಕೆ.ಎಸ್ ಪ್ರಭಾಕರ್ ರವರ ಹುಟ್ಟು ಹಬ್ಬದ ಅಂಗವಾಗಿ ಕಿಕ್ಕೇರಿ ಪಟ್ಟಣದ ಐದು ಸರ್ಕಾರಿ ಶಾಲೆಗಳಿಗೆ ಸಿಹಿ ವಿತರಣೆ ಮಾಡಿದ್ದು ಅವರಿಗೆ ದೇವರು ಆಯಸ್ಸು, ಆರೋಗ್ಯ ಐಶ್ವರ್ಯ ಕರುಣಿಸಲಿ ಎಂದು ಶುಭ ಹಾರೈಸಿದರು..
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಚಂದ್ರಶೇಖರ್, ಮಹೇಂದ್ರ, ಕೆ.ಜಿ ಪುಟ್ಟರಾಜು, ಮುಖಂಡರಾದ ಮೊಟ್ಟೆ ಮಂಜು, ಶೆಟ್ಟಹಳ್ಳಿ ಕೃಷ್ಣಪ್ಪ, ಕುಮಾರ್, ಆಶೋಕದ, ಡಿಶ್ ಪರಮೇಶ್, ವಿಜಯ್ ಕುಮಾರ್, ಜಿಮ್ಮಿ ಮಂಜು, ಗಂಗಾಧರ್, ಚೇತನ್, ಮನು, ಸೇರಿದಂತೆ ಮತ್ತಿತರು ಇದ್ದರು..
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ