ಕಿಕ್ಕೇರಿ: ಪಧವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ರವರು ಹೆಚ್ಚು ಮತಗಳ ಅಂತರದಿAದ ಗೆಲುವು ಸಾಧಿಸಿದ ಹಿನ್ನೆಲೆ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ರವರ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.
ನಂತರ ಮಾತನಾಡಿ ದಕ್ಷಿಣ ಪಧವೀದರ ಚುನಾವಣೆಯಲ್ಲಿ ಮೊದಲ ಬಾರಿಗೆ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡರು ಗೆಲುವು ಸಾದಿಸಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ತಂದಿದೆ ಮುಂದೆ ವಿಧಾನ ಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯವುದರಲ್ಲಿ ಸಂಶಯವಿಲ್ಲ ಎಂದರು ಅಲ್ಲದೆ ಮತ ನೀಡಿದ ಎಲ್ಲಾ ಪಧವೀದರ ಬಂದುಗಳಿಗೆ ಅಭಿನಂದನೆ ತಿಳಿಸಿದರು
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ರಾಮಕೃಷ್ಣೇಗೌಡ್ರು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸಣ್ಣಿಂಗೇಗೌಡ್ರು, ಶಾಮಣ್ಣ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಚಂದ್ರೇಗೌಡ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ತಾರನಾಥ್, ಮುಖಂಡರಾದ ಜಾನೇಗೌಡ್ರು, ಸಾಸಲು ಈರಪ್ಪ, ಸೊಳ್ಳೇಪುರ ಜಯರಾಮು, ಸಣ್ಣಪ್ಪ, ರಾಜಣ್ಣ, ಸೇರಿದಂತೆ ನೂರಾರು ಕಾರ್ಯಕರ್ತರು ಮುಖಂಡರಗಳು, ಪಕ್ಷದ ಅಭಿಮಾನಿಗಳು ಇದ್ದರು
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ