May 4, 2024

Bhavana Tv

Its Your Channel

ಕಿಕ್ಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಿಕ್ಕೇರಿ:-ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಲಿ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಭಿರವನ್ನು ಆಯೋಜನೆ ಮಾಡಿಲಾಗಿತ್ತು

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ನೂರಾರು ಕಾರ್ಮಿಕರು, ಸಾರ್ವಜನಿಕರು ಭಾಗವಹಿಸಿ ತಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರಲ್ಲಿ ಚಿಕಿತ್ಸೆ ಪಡೆದುಕೊಂಡರು…

ಕಾರ್ಯಕ್ರಮದಲ್ಲಿ ಮಂಡ್ಯ ಕಾರ್ಮಿಕರ ನೀರಿಕ್ಷಕರಾದ ಕೃಷ್ಣ ಮಾತನಾಡಿ ಕಟ್ಟಡ ಕಾರ್ಮಿಕ ಇಲಾಖೆಯಲ್ಲಿ ವತಿಯಿಂದ ಪ್ರತಿ ಗುರುವಾರದೊಂದು ಒಂದೊAದು ಪಟ್ಟಣಗಳನ್ನು ಆಯ್ಕೆ ಮಾಡಿಕೊಂಡು ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಜಿಲ್ಲೆಯಾದ್ಯಂತ ನಡೆಯಲಿದ್ದು ಎಲ್ಲಾ ಕಟ್ಟಡ ಕಾರ್ಮಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು..

ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಕಿಕ್ಕೇರಿ ಹೋಬಳಿಯ ಅಧ್ಯಕ್ಷ ರಾಮಚಾರಿ, (ಕುಮಾರ್,) ಗೌರವಧ್ಯಕ್ಷ ಮಂಜುನಾಥ್, ಖಜಾಂಸಿ ಜಗದೀಶ್, ಪ್ರಧಾನ ಕಾರ್ಯದರ್ಶಿ ಜಗದೀಶ್, ಉಪಾದ್ಯಕ್ಷರು ಕಿರಣ್, ವಿವೇಕ್, ಸೇರಿದಂತೆ ಸಂಘ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು..

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

error: