April 29, 2024

Bhavana Tv

Its Your Channel

ಐಕನಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಅಂಕನಹಳ್ಳಿ ಮಂಜೇಗೌಡ್ರು ಅವಿರೋಧ ಆಯ್ಕೆ

ಕೃಷ್ಣರಾಜಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಐಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ತೆರವಾಗಿದ್ದ ಹಿನ್ನೆಲೆ ಇಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರ ಸ್ಥಾನಕ್ಕೆ ಅಂಕನಹಳ್ಳಿ ಮಂಜೇಗೌಡರನ್ನು ಹೊರತು ಪಡಿಸಿ ಮತ್ಯಾರು ನಾಮ ಪತ್ರ ಸಲ್ಲಿಸದ ಕಾರಣ ಅಂಕನಹಳ್ಳಿ ಮಂಜೇಗೌಡರನ್ನು ನೂತನ ಅಧ್ಯಕ್ಷರೆಂದು ಚುನಾವಣೆ ಅಧಿಕಾರಿ ಘೋಷಿಸಿದರು..

ಇದೇ ಸಂದರ್ಭದಲ್ಲಿ ಅಂಕನಹಳ್ಳಿ ಗ್ರಾಮಸ್ಥರು ಹಾಗೂ ಮಂಜೇಗೌಡರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು..

ನಂತರ ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕ ಬಿ.ಎಸ್ ಮಂಜುನಾಥ್ ಮಾತನಾಡಿ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ಗ್ರಾಮಗಳಿಗೆ ಪ್ರಮುಖವಾಗಿ ಬೇಕಾಗುವ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಗ್ರಾಮಗಳ ಅಭಿವೃದ್ಧಿ ಶ್ರಮಿಸುವಂತೆ ತಿಳಿಸಿದರು

ಕಾರ್ಯಕ್ರಮದಲ್ಲಿ ಜೆ.ಡಿ.ಎಸ್ ಪಕ್ಷದ ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷರಾದ ಕಾಯಿ ಮಂಜೇಗೌಡ್ರು, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಐನೋರಹಳ್ಳಿ ಮಲ್ಲೇಶ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಕೃಷ್ಣೇಗೌಡ, ಮುಖಂಡರಾದ ಉದಯಶಂಕರ್, ಬಾಲಚಂದ್ರ, ಬಿ ರಾಮೇಗೌಡ್ರು. ಗ್ರಾಮ ಪಂಚಾಯತಿ ಉಪಾದ್ಯಕ್ಷರಾದ ಸುವರ್ಣ, ಸದಸ್ಯರಾದ ನಂಜುAಡೇಗೌಡ, ಅಂಬುಜಾ, ಈರಾಜು, ಕುಮಾರ್, ದೇವರಾಜು, ನಾಗಮಣಿ, ಪ್ರಸನ್ನ, ಪಲ್ಲವಿ, ಭಾಗ್ಯಮ್ಮ, ಶಂಕರ್, ಸುಧಾ, ಸುಮಿತ್ರಾ, ಕವಿತಾ ಮತ್ತು ಗ್ರಾಮ ಪಂಚಾಯತಿಯ ಪಿ.ಡಿ.ಓ ವಿಜಯಕುಮಾರ್ ಸೇರಿದಂತೆ ನೂರಾರು ಮುಖಂಡರು ಇದ್ದರು..

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

error: