![](https://kannada.bhavanatv.com/wp-content/uploads/2020/05/WhatsApp-Image-2020-05-08-at-1.32.10-PM-1024x576.jpeg?v=1588931795)
ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಭಾರತೀಪುರ ಗ್ರಾಮದಲ್ಲಿ ಮುಂಬೈ ಸೇರಿದಂತೆ ಹೊರ ರಾಜ್ಯಗಳು ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿರುವ ವ್ಯಕ್ತಿಗಳ ಪತ್ತೆ ಹಾಗೂ ಸರ್ವೇ ಕಾರ್ಯಕ್ಕೆ ಸಮಾಜಸೇವಕ ಭಾರತೀಪುರ ಪುಟ್ಟಣ್ಣ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.ಗ್ರಾಮಕ್ಕೆ ಅಪರಿಚಿತ ಹಾಗೂ ಒಳ ನುಸುಳಿರುವ ಆಗಂತುಕ ವ್ಯಕ್ತಿಗಳ ಸರ್ವೇ ಕಾರ್ಯಕ್ಕೆ ಆಗಮಿಸಿದ ಶಿಕ್ಷಕರಿಗೆ ಮಾಸ್ಕ್ ಗಳು ಹಾಗೂ ಸ್ಯಾನಿಟೈಸರ್ ವಿತರಿಸಿ ಸ್ವಾಗತಿಸಿದ ಪುಟ್ಟಣ್ಣ ಗ್ರಾಮಸ್ಥರು ಕಡ್ಡಾಯವಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಕೊರೋನಾ ನಿಯಂತ್ರಣಕ್ಕೆ ಮುಂದಾಗಬೇಕು..ಮುAಬೈ ಸೇರಿದಂತೆ ಹೊರ ರಾಜ್ಯಗಳಿಂದ ಗ್ರಾಮಕ್ಕೆ ಅಕ್ರಮವಾಗಿ ಬಂದಿರುವ ವ್ಯಕ್ತಿಗಳಿಗೆ ಸರ್ವೇ ಕಾರ್ಯಮಾಡಲು ಆಗಮಿಸಿರುವ ಶಿಕ್ಷಕರಿಗೆ ಇಲ್ಲವೇ ಆರೋಗ್ಯ ಕಾರ್ಯಕರ್ತರಿಗೆ ಮಾಹಿತಿ ನೀಡಬೇಕು ಎಂದು ಪುಟ್ಟಣ್ಣ ಕೈಮುಗಿದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಭಾರತೀಪುರ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ