May 4, 2024

Bhavana Tv

Its Your Channel

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ರವರ ಹುಟ್ಟು ಹಬ್ಬ ಅದ್ದೂರಿಯಾಗಿ ಆಚರಣೆ

ಕಿಕ್ಕೇರಿ:- ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ರವರ ಹುಟ್ಟು ಹಬ್ಬವನ್ನು ಸಾವಿರಾರು ಕಾರ್ಯಕರ್ತರು ಅದ್ದೂರಿಯಾಗಿ ಆಚರಣೆ ಮಾಡಲಾಯಿತು

ಕೃಷ್ಣರಾಜಪೇಟೆ ತಾಲ್ಲೂಕಿನ ಜನಪ್ರಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಹಾಗೂ ಮುಂಬರುವ ವಿಧಾನ ಸಭಾ ಚುನಾಣೆಗೆ ಪ್ರಬಲ ಆಕಾಂಕ್ಷಿಯಾಗಿರುವ ಕಿಕ್ಕೇರಿ ಸುರೇಶ್ ರವರ ಹುಟ್ಟು ಹಬ್ಬವನ್ನು ಕಿಕ್ಕೇರಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಪಟಾಕಿ ಸಿಡಿಸಿ ಬೃಹತ್ ಗಾತ್ರದ ಹಾರ ಹಾಕಿ ಬೃಹತ್ ಕೇಕ್ ಕತ್ತರಿಸಿಸುವ ಮೂಲಕ ಅದ್ದೂರಿಯಾಗಿ ಆಚರಣೆ ಮಾಡಿ ಕಿಕ್ಕೇರಿ ಸುರೇಶ್ ರವರಿಗೆ ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೋಡಿಮರಹನಹಳ್ಳಿ ದೇವರಾಜು, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಹಳ್ಳಿ ಮಹೇಂದ್ರ, ಚಿಕ್ಕೋನಹಳ್ಳಿ ಚೇತನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಕ್, ಪ್ರವೀಣ್, ಗ್ರಾಮ ಪಂಚಾಯತಿ ಅಧ್ಯಕ್ಷ ಗಂಗೇನಹಳ್ಳಿ ರಘು, ಮಾಜಿ ಜಯರಾಮು, ಚಂದ್ರೇಗೌಡ, ನಿವೃತ್ತ ಪ್ರಾಂಶುಪಾಲ ಜಾನೇಗೌಡ್ರು, ಚಂದ್ರ ಮೋಹನ್, ಮುಖಂಡರಾದ ಸಾಸಲು ಈರಪ್ಪ, ದೇವರಹಳ್ಳಿ ಚೇತನ್, ಶರತ್,ಪ್ರಕಾಶ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಇದ್ದರು

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

error: