April 18, 2024

Bhavana Tv

Its Your Channel

ವಿಜೃಂಭಣೆಯಿoದ ನಡೆದ ಶ್ರೀ ಗವಿರಂಗನಾಥ ದೇವಾಲಯದ ಬ್ರಹ್ಮ ರಥೋತ್ಸವ

ಕಿಕ್ಕೇರಿ: ಶ್ರೀ ಗವಿರಂಗನಾಥ ದೇವಾಲಯದ ಬ್ರಹ್ಮ ರಥೋತ್ಸವ ವಿಜೃಂಭಣೆಯಿAದ ಸಡಗರ ಸಂಭ್ರಮದಿAದ ನಡೆಯಿತು

ಸಂತೇಬಾಚಹಳ್ಳಿ ಹೋಬಳಿಯ ಬಿಲ್ಲೇನಹಳ್ಳಿ ಗ್ರಾಮದಲ್ಲಿರುವ ಸುಪ್ರಸಿದ್ದ ದೇವಾಲಯ ಶ್ರೀ ಗವಿರಂಗನಾಥ ಸ್ವಾಮಿಯ ದೇವಾಲಯದಲ್ಲಿ ಸಂಕ್ರಾAತಿ ಹಬ್ಬದ ಪ್ರಯುಕ್ತ ವಿಜೃಂಭಣೆಯಿAದ ಬ್ರಹ್ಮ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ, ಹಾಗೂ ತಹಶೀಲ್ದಾರ್ ರೂಪ ಹಾಗೂ ಗ್ರಾಮದ ಮುಖಂಡರು ರಥೋತ್ಸವಕ್ಕೆ ಚಾಲನೆ ನೀಡಿದರು.

ಚಾಲನೆ ನೀಡಿ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಶ್ರೀ ಗವಿರಂಗನಾಥ ದೇವಾಲಯ ಪವಿತ್ರ ದೇವಾಲಯವಾಗಿದೆ ಹಾಗೂ ದೇವಾಲಯ ಮುಜುರಾಯಿ ಇಲಾಖೆಗೆ ಒಳಪಟ್ಟಿದ್ದು ಈ ವರ್ಷದಲ್ಲಿ ತಹಶೀಲ್ದಾರ್ ರೂಪ ನೇತೃತ್ವದಲ್ಲಿ ಉದ್ಯಾನವನ ಅಭಿವೃದ್ಧಿ, ದೇವಾಲಯದಲ್ಲಿ ರಸ್ತೆ ಅಭಿವೃದ್ಧಿ, ಸಮುದಾಯ ಭವನ ಅಭಿವೃದ್ಧಿ ಮಾಡಿದ್ದು ತಹಶೀಲ್ದಾರ್ ದಕ್ಷತೆಯಿಂದ ಕೆಲಸ ಮಾಡಿದ್ದಾರೆ ಹಾಗೂ ಸಿಬ್ಬಂದಿಗಳು ಕೂಡ ದೇವಾಲಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಭಕ್ತರಿಗೆ ಕುಡಿಯುವ ನೀರು, ಸಾರಿಗೆ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಸೇರಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲಾಗಿದೆ ಇನ್ನು ದೇವಾಲಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ವರದಿ ಶಂಭು ಕಿಕ್ಕೇರಿ,
ಕೃಷ್ಣರಾಜಪೇಟೆ

error: