ಕೃಷ್ಣರಾಜಪೇಟೆ:- ಗ್ರಾಮಗಳ ಅಭಿವೃದ್ಧಿಯೇ ನನ್ನ ಗುರಿ, ಕುಮಾರಣ್ಣನವರ ಕನಸು ಪಂಚ ರತ್ನ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಕುಮಾರಣ್ಣನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಮಾಡಲು ಜೆ.ಡಿ.ಎಸ್ ಪಕ್ಷವನ್ನು ಬೆಂಬಲಿಸುವAತೆ ವಿಧಾನಸಭಾ ಚುನಾವಣೆಯ ಜೆ.ಡಿ.ಎಸ್ ಅಭ್ಯರ್ಥಿ ಹೆಚ್ ಟಿ ಮಂಜು ತಿಳಿಸಿದರು.
ಕೃಷ್ಣರಾಜಪೇಟೆ ತಾಲ್ಲೂಕಿನ ಹಕ್ಕಿಹೆಬ್ಬಾಳು ಹೋಬಳಿಯ ಮಂದಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮನೆ ಮನೆಗೆ ಮಂಜಣ್ಣ ಎಂಬುವ ಕಾರ್ಯಕ್ರಮಕ್ಕೆ ಕಟ್ಟೆಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.
ಜೆ.ಡಿ.ಎಸ್ ಅಭ್ಯರ್ಥಿ ಹೆಚ್ ಟಿ ಮಂಜು ಮಾತನಾಡಿ ಕುಮಾರಣ್ಣ ನವರ ಸರ್ಕಾರ ಇದ್ದ ಸಂದರ್ಭದಲ್ಲಿ ರೈತರ ಕಷ್ಟ ಅರಿತು ಸಾಲಮನ್ನಾ ಮಾಡಿದ್ದು ಲಕ್ಷಾಂತರ ರೈತರಿಗೆ ಅನುಕೂಲವಾಗಿದ್ದು, ಪಂಚರತ್ನ ಯೋಜನೆಯಡಿ ಮಕ್ಕಳ ವಿದ್ಯಾಭ್ಯಾಸ, ಯುವಕರ ನಿರುದ್ಯೋಗ ಸಮಸ್ಯೆ, ಆಸ್ಪತ್ರೆಗಳ ಅಭಿವೃದ್ಧಿ, ಸೇರಿದಂತೆ ಹಲವು ಯೋಜನೆಗಳನ್ನು ಒಳಗೊಂಡಿದ್ದು ಇದಕ್ಕಾಗಿ ಕುಮಾರಣ್ಣನವರನ್ನು ಮುಖ್ಯಮಂತ್ರಿ ಮಾಡಲು ಜೆ.ಡಿಎಸ್ ಪಕ್ಷವನ್ನು ಬೆಂಬಲಿಸಿ ನಿಮ್ಮ ಮನೆಯ ಮಗನಾಗಿ ನಾನು ಕೆ ಆರ್ ಪೇಟೆ ಕ್ಷೇತ್ರವನ್ನು ಅಭಿವೃದ್ಧಿ ಹೀಗೂ ಮಾಡುವುದು ಎಂದು ತೋರಿಸುತ್ತೇನೆ ಅಲ್ಲದೆ ತಾಲ್ಲೂಕಿನ ಜನತೆಯ ಸೇವೆ ಮಾಡಲು ಒಂದು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು
ಕಾರ್ಯಕ್ರಮದಲ್ಲಿ ಜೆ.ಡಿ.ಎಸ್ ತಾಲ್ಲೂಕು ಅದ್ಯಕ್ಷ ಜಾನಕಿರಾಮು, ಎಂ.ಡಿ.ಸಿ.ಸಿ ಬ್ಯಾಂಕ್ ಉಪಾದ್ಯಕ್ಷ ಹೊಸಹೊಳಲು ಆಶೋಕ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮೋಹನ್, ಶಾರದಮ್ಮ ಕೃಷ್ಣೇಗೌಡ್ರು, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅದ್ಯಕ್ಷ ಶೇಖರ್, ಹೆಚ್ ಟಿ ಮಂಜು ರವರ ಆಪ್ತ ಕಾರಚಯದರ್ಶಿ ಪ್ರತಾಪ್ ಸೇರಿದಂತೆ ಮುಂತಾದವರು ಇದ್ದರು
ವರದಿ ಶಂಭು ಕಿಕ್ಕೇರಿ,
ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ