ಕಿಕ್ಕೇರಿ: ಕ್ರೀಡಾಪಟುಗಳು ಗೆದ್ದಾಗ ಬೀಗದೆ ಸೋತಾಗ ಕುಗ್ಗದೆ ಇದ್ದರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಗೈಯಲು ಸಾಧ್ಯ,ಎಂದು ಸಮಾಜ ಸೇವಕ ಮತ್ತು ಕಾಂಗ್ರೆಸ್ ಪಕ್ಷದ ಯುವ ಘಟಕದ ಅಧ್ಯಕ್ಷ ದೇವರಹಳ್ಳಿ ಮಹೇಂದ್ರ ತಿಳಿಸಿದರು.
ಕೃಷ್ಣರಾಜಪೇಟೆ ತಾಲೂಕಿನ ಹೊಸಹೊಳಲು ಯುವಕರ ಬಳಗದ ವತಿಯಿಂದ, ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜನೆ ಮಾಡಿದ್ದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಮತ್ತು ಅಕ್ಕಿಹೆಬ್ಬಾಳು ಗ್ರಾಮದ ಯುವಕರ ಬಳಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಸಮಾಜ ಸೇವಕ ಮತ್ತು ಕಾಂಗ್ರೆಸ್ ಪಕ್ಷದ ಯುವ ಘಟಕದ ಅಧ್ಯಕ್ಷರಾದ ದೇವರಹಳ್ಳಿ ಮಹೇಂದ್ರ ರವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು
ಬಳಿಕ ಮಾತನಾಡಿ ಗ್ರಾಮೀಣ ಭಾಗದ ಯುವಕರು ಅತ್ಯುತ್ತಮ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಆಟಗಾರರಿದ್ದಾರೆ.ಆದರೆ ಸೂಕ್ತ ವೇದಿಕೆ ಇಲ್ಲದೆ ಅವಕಾಶ ವಂಚಿತರಾಗಿ ಬೆಳಕಿಗೆ ಬರುತ್ತಿಲ್ಲ. ಕ್ರೀಡಾಸಕ್ತರಿಂದ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಸಂಘಟಿಸುವುದರಿAದ ನೈಪುಣ್ಯತೆ ಉಳ್ಳ ಆಟಗಾರರು ಬೆಳಕಿಗೆ ಬರಲು ಸಾಧ್ಯ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ದೀಪಕ್ ಗೌಡ ಮಂ ಡ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ವರುಣ್ ಗೌಡ, ಮಾಕವಳ್ಳಿ ಗುರು, ಹೊಸಹೊಳಲು ಅಜಯ್, ಸೈಫ್, ಕಿಕ್ಕೇರಿ ಶ್ರೀಕಾಂತ್, ರಕ್ಷಿತ್, ಕೇಶವ್,ನಿತಿನ್, ದೇವರಹಳ್ಳಿ ಚೇತನ್, ಪವನ್, ಶರತ್ ಸೇರಿದಂತೆ ಮತ್ತಿತ್ತರರು ಭಾಗವಹಿಸಿದ್ದರು..
ವರದಿ ಶಂಭು ಕಿಕ್ಕೇರಿ ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ