ಮಂಡ್ಯ: ಕೃಷ್ಣರಾಜಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ನಿರ್ದೇಶಕರನ್ನಾಗಿ ಸರ್ಕಾರವು ಮಹಿಳಾ ಹೋರಾಟಗಾರ್ತಿ ಪ್ರಮೀಳವರದರಾಜೇಗೌಡ ಮತ್ತು ಮುಖಂಡ ಹೊಸೂರು ಸ್ವಾಮಿಗೌಡ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿನ್ನೆ ನಡೆದ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಪ್ರಮೀಳಾ ಮತ್ತು ಸ್ವಾಮಿಗೌಡ ರೈತರ ಸೇವೆ ಮಾಡಲು ಕ್ಷೇತ್ರದ ಶಾಸಕರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರು ಅವಕಾಶ ಒದಗಿಸಿಕೊಟ್ಟಿದ್ದಾರೆ. ಮಾರುಕಟ್ಟೆಯಲ್ಲಿ ದಳ್ಳಾಳಿಗಳ ಹಾವಳಿಯನ್ನು ತಪ್ಪಿಸಿ ರೈತರ ಕೃಷಿ ಉತ್ಪನ್ನಗಳಿಗೆ ಒಳ್ಳೆಯ ಬೆಲೆಕೊಡಿಸಿಕೊಡಲು ಶ್ರಮವಹಿಸುವುದಾಗಿ ನೂತನ ನಿರ್ದೇಶಕರು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತಸಹಾಯಕರಾದ ದಯಾನಂದ, ಬಿಜೆಪಿ ಕಾರ್ಯಕರ್ತರಾದ ಕೆ.ವಿನೋದ್ ಕುಮಾರ್, ಪ್ರವೀಣ್, ಮೋದೂರುಮಂಜು, ಮಂಜುನಾಥಗೌಡ, ಅರುಣ್ ಕುಮಾರ್, ಹರಳಹಳ್ಳಿ ಗ್ರಾಮ ಪಂಚಾಯತಿ ಮಾಜಿಅಧ್ಯಕ್ಷ ಕರ್ತೇನಹಳ್ಳಿ ಸುರೇಶ್, ಎಪಿಎಂಸಿ ಕಾರ್ಯದರ್ಶಿ ಇಕ್ಬಾಲ್ ಪಾಶ ಮತ್ತಿತರರು ಉಪಸ್ಥಿತರಿದ್ದರು.
ವರದಿ. ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ ..
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ