May 17, 2024

Bhavana Tv

Its Your Channel

ಕೃಷ್ಣರಾಜಪೇಟೆ ಎಪಿಎಂಸಿ ಗೆ ನಾಮನಿರ್ದೇಶಿತ ಸದಸ್ಯರ ನೇಮಕ; ಬಿಜೆಪಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ .

ಮಂಡ್ಯ: ಕೃಷ್ಣರಾಜಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ನಿರ್ದೇಶಕರನ್ನಾಗಿ ಸರ್ಕಾರವು ಮಹಿಳಾ ಹೋರಾಟಗಾರ್ತಿ ಪ್ರಮೀಳವರದರಾಜೇಗೌಡ ಮತ್ತು ಮುಖಂಡ ಹೊಸೂರು ಸ್ವಾಮಿಗೌಡ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿನ್ನೆ ನಡೆದ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಪ್ರಮೀಳಾ ಮತ್ತು ಸ್ವಾಮಿಗೌಡ ರೈತರ ಸೇವೆ ಮಾಡಲು ಕ್ಷೇತ್ರದ ಶಾಸಕರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರು ಅವಕಾಶ ಒದಗಿಸಿಕೊಟ್ಟಿದ್ದಾರೆ. ಮಾರುಕಟ್ಟೆಯಲ್ಲಿ ದಳ್ಳಾಳಿಗಳ ಹಾವಳಿಯನ್ನು ತಪ್ಪಿಸಿ ರೈತರ ಕೃಷಿ ಉತ್ಪನ್ನಗಳಿಗೆ ಒಳ್ಳೆಯ ಬೆಲೆಕೊಡಿಸಿಕೊಡಲು ಶ್ರಮವಹಿಸುವುದಾಗಿ ನೂತನ ನಿರ್ದೇಶಕರು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತಸಹಾಯಕರಾದ ದಯಾನಂದ, ಬಿಜೆಪಿ ಕಾರ್ಯಕರ್ತರಾದ ಕೆ.ವಿನೋದ್ ಕುಮಾರ್, ಪ್ರವೀಣ್, ಮೋದೂರುಮಂಜು, ಮಂಜುನಾಥಗೌಡ, ಅರುಣ್ ಕುಮಾರ್, ಹರಳಹಳ್ಳಿ ಗ್ರಾಮ ಪಂಚಾಯತಿ ಮಾಜಿಅಧ್ಯಕ್ಷ ಕರ್ತೇನಹಳ್ಳಿ ಸುರೇಶ್, ಎಪಿಎಂಸಿ ಕಾರ್ಯದರ್ಶಿ ಇಕ್ಬಾಲ್ ಪಾಶ ಮತ್ತಿತರರು ಉಪಸ್ಥಿತರಿದ್ದರು.

ವರದಿ. ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ ..

error: