ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಜೆಡಿಎಸ್ ಮುಖಂಡ ಜೆ.ಚಂದ್ರಹಾಸ ಮತ್ತು ಉಪಾಧ್ಯಕ್ಷರಾಗಿ ಮಂಜಮ್ಮ ಅವಿರೋಧವಾಗಿ ಆಯ್ಕೆಯಾದರು. ಮೂರನೇ ಅವಧಿಯ ಅಧ್ಯಕ್ಷಗಾಧಿಗೆ ಐನೋರಹಳ್ಳಿ ಮಲ್ಲೇಶ್ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚಂದ್ರಹಾಸ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಂಜಮ್ಮ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳಾದ ತಹಶೀಲ್ದಾರ್ ಶಿವಮೂರ್ತಿ ಅವಿರೋಧ ಆಯ್ಕೆ ಪ್ರಕಟಿಸಿದರು. ತಹಶೀಲ್ದಾರ್ ಎಂ.ಶಿವಮೂರ್ತಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯು ಘೋಷಣೆಯಾಗುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ಪ್ರೇಮಾಬಸವೇಗೌಡ, ಬಿ.ಎ.ಸುರೇಶ್, ತರಕಾರಿ ನಾಗರಾಜು, ಸೋಮಸುಂದರ್, ಭುವನೇಶ್ವರಿ, ಕೆ.ಎನ್.ಕೃಷ್ಣ, ಸಂಗಾಪುರ ಶಶಿಧರ, ಎಂ.ಪಿ.ಲೋಕೇಶ್, ಐನೋರಹಳ್ಳಿ ಮಲ್ಲೇಶ್, ನಾಮನಿರ್ದೇಶಿತ ಸದಸ್ಯರಾದ ಹೊಸೂರು ಸ್ವಾಮಿಗೌಡ ಮತ್ತು ಪ್ರಮೀಳವರದರಾಜೇಗೌಡ ಭಾಗವಹಿಸಿದ್ದರು. ಸಹಾಯಕ ಚುನಾವಣಾಧಿಕಾರಿಗಳಾಗಿ ಎಪಿಎಂಸಿ ಕಾರ್ಯದರ್ಶಿ ಗೌಸ್ ಪಾಶ ಮತ್ತು ಸತೀಶ್ ಭಾಗವಹಿಸಿದ್ದರು.
ಅಭಿನಂದನೆ .. ನೂತನ ಅಧ್ಯಕ್ಷ ಚಂದ್ರಹಾಸ ಮತ್ತು ಉಪಾಧ್ಯಕ್ಷೆ ಮಂಜಮ್ಮ ಅವರನ್ನು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಜೆಡಿಎಸ್ ಹಿರಿಯ ಮುಖಂಡರಾದ ಬಿ.ಎಲ್.ದೇವರಾಜು, ಬಸ್ ಕೃಷ್ಣೇಗೌಡ, ಯುವಜೆಡಿಎಸ್ ಅಧ್ಯಕ್ಷ ಕೆ.ಎಸ್.ಸಂತೋಷ್, ಜಿ.ಪಂ ಮಾಜಿಅಧ್ಯಕ್ಷೆ ಜೆ.ಪ್ರೇಮಕುಮಾರಿ ಅಭಿನಂದಿಸಿದರು.
ವರದಿ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ