May 17, 2024

Bhavana Tv

Its Your Channel

ಕೆ.ಆರ್.ಪೇಟೆ ಬೀದಿಬದಿಯಲ್ಲಿ ವ್ಯಾಪಾರ ನಡೆಸುವವರಿಗೆ ಬದಲಿ ವ್ಯವಸ್ಥೆ ಕಲ್ಪಿಸುವವರೆಗೆ ತೊಂದರೆ ನೀಡಬೇಡಿ :ಸಚಿವ ನಾರಾಯಣಗೌಡ

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಬದಲೀ ವ್ಯವಸ್ಥೆಯನ್ನು ಕಲ್ಪಿಸುವವರೆಗೆ ರಸ್ತೆ ಬದಿಯ ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡುವ ಬಡ ಹೂವು, ಹಣ್ಣು ವ್ಯಾಪಾರಿಗಳಿಗೆ ತೊಂದರೆ ನೀಡಬೇಡಿ, ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮೈಸೂರಿನ ಕೆ.ಆರ್. ಮಾರುಕಟ್ಟೆ ಮಾದರಿಯಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಾಣ ಮಾಡುವವರೆಗೆ ರಸ್ತೆ ಬದಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದoತೆ ವ್ಯಾಪಾರ, ವಹಿವಾಟು ಮಾಡಿಕೊಳ್ಳಲು ಅವಕಾಶ ನೀಡಿ ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಹಾಗೂ ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಸಚಿವ ನಾರಾಯಣಗೌಡ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ಪುರಸಭೆ ಸದಸ್ಯರಾದ ಹೆಚ್.ಆರ್.ಲೋಕೇಶ್, ದಿನೇಶ್, ಶಾಮಿಯಾನತಿಮ್ಮೇಗೌಡ, ಗಿರೀಶ್, ಮಹಾದೇವಿ ನಂಜುoಡ, ಕೆ.ಆರ್.ಹೇಮಂತಕುಮಾರ್, ಕೆ.ವಿನೋದ್ ರಸ್ತೆ ಬದಿಯ ವ್ಯಾಪಾರಿಗಳ ನಿಯೋಗದ ಹಣ್ಣಿನ ಅಂಗಡಿ ರಾಮಣ್ಣ, ಹೂವಿನ ರತ್ನಮ್ಮ, ದ್ರಾಕ್ಷಾಯಿಣಿ, ಸರೋಜಮ್ಮ, ರಾಜಣ್ಣ, ಆಶಾಲತ, ವಾಸು ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು ಮತ್ತಿತರರು ಉಪಸ್ಥಿತರಿದ್ದರು.

ವರದಿ. ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ ….

error: