May 14, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕು ಬಿಜೆಪಿ ಪರಿಶಿಷ್ಠ ವಿಭಾಗ ಮೋರ್ಚಾ ಅಧ್ಯಕ್ಷರಾಗಿ ನೇಮಕವಾಗಿರುವ ಯುವಮುಖಂಡ ನಾರ್ಗೋನಹಳ್ಳಿ ರವಿಶಿವಕುಮಾರ್ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅಭಿನಂದಿಸಿದರು …

ಕೃಷ್ಣರಾಜಪೇಟೆ ; ಬಿಜೆಪಿ ಪಕ್ಷವು ರಾಜ್ಯದ ಸಮಗ್ರವಾದ ಅಭಿವೃದ್ಧಿ ಸೇರಿದಂತೆ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣಕ್ಕೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಸಮಾನತೆಯ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ದುಡಿಯುತ್ತಿದೆ. ಪ್ರಧಾನಿ ನರೇಂದ್ರಮೋಧಿ ಹಾಗೂ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಅಭಿವೃದ್ಧಿಯನ್ನು ಗುರಿಯನ್ನಾಗಿಸಿಕೊಂಡು ದಕ್ಷ ಹಾಗೂ ಪ್ರಾಮಾಣಿಕವಾದ ಆಡಳಿತ ನೀಡುತ್ತಿದ್ದಾರೆ. ಆದ್ದರಿಂದ ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಮನಮುಟ್ಟುವಂತೆ ಹೇಳಿ, ಬಿಜೆಪಿ ಪಕ್ಷದ ಬಗ್ಗೆ ಒಲವು ಮೂಡಿಸಿ ಸಂಘಟನೆಗೆ ಒತ್ತು ನೀಡಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಮಲ ಅರಳುವಂತೆ ಮಾಡಿ ಜೆಡಿಎಸ್-ಕಾಂಗ್ರೆಸ್ ಪಕ್ಷಗಳನ್ನು ಧೂಳಿಪಟ ಮಾಡಬೇಕು ಎಂದು ಸಚಿವ ನಾರಾಯಣಗೌಡ ನೂತನ ಎಸ್.ಸಿ ಮೋರ್ಚಾ ಅಧ್ಯಕ್ಷ ರವಿಶಿವಕುಮಾರ್ ಅವರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಜಿ.ಪಂ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ಪುರಸಭೆ ಸದಸ್ಯ ನಟರಾಜು, ಮುಖಂಡರಾದ ಮೊಟ್ಟೆನಾಗಣ್ಣ, ಅಘಲಯ ಮಂಜುನಾಥ್, ದಯಾನಂದ, ಕಿಕ್ಕೇರಿ ಕುಮಾರ್, ಕೈಗೋನಹಳ್ಳಿ ಕುಮಾರ್, ಮಾಮಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

ವರದಿ. ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ …

error: