May 4, 2024

Bhavana Tv

Its Your Channel

ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ನೀಡಿದ್ದ ಉಚಿತ ಲ್ಯಾಪ್ ಟ್ಯಾಪ್ ಗಳನ್ನು ವಿತರಿಸಿದ ಸಚಿವರಾದ ಡಾ.ನಾರಾಯಣಗೌಡ….

ಕೃಷ್ಣರಾಜಪೇಟೆ ; ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಿಗೆ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ನೀಡಿದ್ದ ಉಚಿತ ಲ್ಯಾಪ್ ಟ್ಯಾಪ್ ಗಳನ್ನು ವಿತರಿಸಿದ ಕ್ಷೇತ್ರದ ಶಾಸಕರಾದ ರಾಜ್ಯದ ತೋಟಗಾರಿಕೆ, ರೇಷ್ಮೆ, ಪೌರಾಡಳಿತ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ….

ಹೆಣ್ಣು ಮಕ್ಕಳು ಇಂದು ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸರ್ವಶ್ರೇಷ್ಠ ಸಾಧನೆ ಮಾಡುತ್ತಿದ್ದಾರೆ. ಆದ್ದರಿಂದ ಹೆಣ್ಣು ಮಕ್ಕಳು ಶಿಕ್ಷಣದ ಶಕ್ತಿಯ ಮೂಲಕ ಸಾಧನೆ ಮಾಡಬೇಕು. ಲ್ಯಾಪ್ ಟಾಪ್ ಗಳನ್ನು ಸದ್ಬಳಕೆ ಮಾಡಿಕೊಂಡು ಪ್ರಗತಿಯ ದಿಕ್ಕಿನತ್ತ ಸಾಧನೆ ಮಾಡಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು….

ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್, ಸಹ ಪ್ರಾಧ್ಯಾಪಕರಾದ ಧನಂಜಯ, ರಾಜಣ್ಣ, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕರಾದ ಬಳ್ಳೇಕೆರೆ ಮಂಜುನಾಥ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ ಜಿಲ್ಲೆ.

error: