ಮಂಡ್ಯ: ಜಿಲ್ಲೆಯಕೆ.ಆರ್.ಪೇಟೆ ಪಟ್ಟಣದ ಬಸವೇಶ್ವರ ನಗರ ಬಡಾವಣೆಯಲ್ಲಿ ವಾಸವಾಗಿರುವ ಚಂದನ ನಾವಲ್ಟೀಸ್ ಮಾಲೀಕರಾದ ಶಿವಪ್ರಸಾದ್ ಅವರ ಮನೆಯ ಕಿಟಕಿಯ ಸರಳುಗಳನ್ನು ಮುರಿದು ಹಾಡುಹಗಲೇ ಮನೆಗೆ ನುಗ್ಗಿ ಹಣ ಹಾಗೂ ಚಿನ್ನ, ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿರುವ ಕಳ್ಳರು. ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು, ಕಳ್ಳರ ಬಂಧನಕ್ಕೆ ಬಲೆ ಬೀಸಿರುವ ಪೋಲಿಸರು,
ಸಾಲಿಗ್ರಾಮಕ್ಕೆ ನೆಂಟರ ಮನೆಗೆ ಹೋಗಿ ಬರಲು ಮನೆಗೆ ಬೀಗ ಹಾಕಿಕೊಂಡು ಶಿವಪ್ರಸಾದ್ ದಂಪತಿಗಳು ತೆರಳಿದ್ದನ್ನು ಗಮನಿಸಿರುವ ಚಾಲಾಕಿ ಕಳ್ಳರು ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ಹಾಡುಹಗಲೇ ರಾಜಾರೋಷವಾಗಿ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.ಮನೆಯ ಬೀರುವಿನಲ್ಲಿಟ್ಟಿದ್ದ ೧,೮೦,೦೦೦ ರೂ ನಗಧು ಹಣ, ಮೂರು ಜೊತೆ ಚಿನ್ನದ ಓಲೆಗಳು, ಒಂದು ವಜ್ರದುಂಗುರ ಹಾಗೂ ಅರ್ಧ ಕೆ.ಜಿ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ದುಷ್ಕರ್ಮಿಗಳು ದೋಚಿಕೊಂಡು ಪರಾರಿಯಾಗಿದ್ದಾರೆ.ಸಾಲಿಗ್ರಾಮದಿಂದ ನೆಂಟರ ಮನೆಯಿಂದ ಸಂಜೆ ಮರಳಿ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಶಿವಪ್ರಸಾದ್ ದಂಪತಿಗಳಿಗೆ ಗೊತ್ತಾಗಿದೆ.
ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ದುಷ್ಕರ್ಮಿಗಳನ್ನು ಪತ್ತೆ ಮಾಡಲು ಬೆರಳಚ್ಚು ತಜ್ಞರು ಹಾಗೂ ಶ್ವಾನದಳವು ಆಗಮಿಸಿ ಕಸರತ್ತು ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ ..
ನಾಗಮಂಗಲ ಡಿವೈಎಸ್ ಪಿ ನವೀನ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ತೊಳಜಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಘಟನೆಯ ಬಗ್ಗೆ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರ ಬಂಧನಕ್ಕೆ ಬಲೆ ಬೀಸಿರುವ ಪಟ್ಟಣ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ