April 28, 2024

Bhavana Tv

Its Your Channel

ವಿಠಲಾಪುರ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಸೇರಿದ ಜಾಗದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುತ್ತಿರುವುದನ್ನು ವಿರೋಧಿಸಿ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ ವಿಠಲಾಪುರ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಸೇರಿದ ಜಾಗದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುತ್ತಿರುವುದನ್ನು ವಿರೋಧಿಸಿ ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು …

ವಿಠಲಾಪುರ ಗ್ರಾಮದ ಸುರೇಶ್ ಬಿನ್ ವಿಷಕಂಠಯ್ಯ ಎಂಬ ವ್ಯಕ್ತಿಯು ಸೊಸೈಟಿಗೆ ಸೇರಿದ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುತ್ತಿದ್ದಾರೆ. ಈ ಬಗ್ಗೆ ಪಟ್ಟಣದ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದು, ತಹಶೀಲ್ದಾರ್ ಅವರ ಕಛೇರಿಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಆದ್ದರಿಂದ ಸೊಸೈಟಿಗೆ ಸೇರಿದ ಆಸ್ತಿಯನ್ನು ಉಳಿಸಲು ಹೋರಾಟದ ಹಾದಿಯನ್ನು ತುಳಿದಿದ್ದೇವೆ ಎಂದು ವಿವರಿಸಿದ ಗ್ರಾಮದ ಮುಖಂಡ ರಾಜಶೇಖರ ಮತ್ತು ಜನಪರ ಹೋರಾಟಗಾರ ಸಂತೋಷಕುಮಾರ್ ಅಕ್ರಮ ವಾಣಿಜ್ಯ ಸಮುಚ್ಛಯದ ಕಾಮಗಾರಿಯನ್ನು ನಿಲ್ಲಿಸಿ ನಿವೇಶನವನ್ನು ಸೊಸೈಟಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿದರು…

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಮತ್ತು ತಹಶೀಲ್ದಾರ್ ಎಂ.ಶಿವಮೂರ್ತಿ ಅಕ್ರಮ ಮಳಿಗೆಗಳ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಿ ಸೊಸೈಟಿಗೆ ನಿವೇಶನವನ್ನು ಉಳಿಸಿಕೊಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಮ್ಮ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟರು..

ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: