ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಸಂಘಟನಾ ಚತುರ ಸಿ.ಕೆ.ಶಿವರಾಮೇಗೌಡ ಇಂದು ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಶಂಭೂಗೌಡರ ಸಮಕ್ಷಮದಲ್ಲಿ ಅಧಿಕಾರ ಸ್ವೀಕರಿಸಿದರು ….
ಈ ಹಿಂದೆ ತಾಲೂಕು ಘಟಕದ ಅಧ್ಯಕ್ಷರಾಗಿದ್ದ ಎನ್.ಜಯರಾಂ ಅವರ ವಯೋನಿವೃತ್ತಿಯ ಹಿನ್ನೆಲೆಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶಿವರಾಮೇಗೌಡ ಮತ್ತು ಪದ್ಮೇಶ್ ಪ್ರಭಲವಾದ ಆಕಾಂಕ್ಷಿಗಳಾಗಿದ್ದು ಸಚಿವ ಡಾ.ನಾರಾಯಣಗೌಡ ಅವರು ನೌಕರರ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮೊದಲ ಅವಧಿಗೆ ಶಿವರಾಮೇಗೌಡ ಹಾಗೂ ನಂತರದ ಅವಧಿಗೆ ಪದ್ಮೇಶ್ ಅವರು ಕ್ರಮವಾಗಿ ಆಡಳಿತ ನಡೆಸುವಂತೆ ನಿರ್ಧಾರ ಮಾಡಿದಕ್ಕೆ ನೌಕರ ಬಂಧುಗಳು ಒಪ್ಪಿಗೆ ಸೂಚಿಸಿದರು.
ಸರ್ಕಾರಿ ನೌಕರರ ಕುಂದುಕೊರತೆಗಳ ನಿವಾರಣೆಗೆ ಬದ್ಧವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಘೋಷಿಸಿದ ನೂತನ ಅಧ್ಯಕ್ಷ ಶಿವರಾಮೇಗೌಡ ಸರ್ಕಾರಿ ನೌಕರರ ನೂತನ ಸುಸಜ್ಜಿತವಾದ ಭವನದ ನಿರ್ಮಾಣಕ್ಕೆ ಸಚಿವ ನಾರಾಯಣಗೌಡರ ಸಹಕಾರವನ್ನು ಪಡೆದು ನಿವೇಶನವನ್ನು ಪಡೆದುಕೊಂಡು ಚಾಲನೆ ನೀಡುವುದಾಗಿ ಪ್ರಕಟಿಸಿದರು…
ಸಚಿವ ನಾರಾಯಣಗೌಡರ ಆಪ್ತಸಹಾಯಕರಾದ ದಯಾನಂದ ಅವರು ನೂತನ ಅಧ್ಯಕ್ಷ ಶಿವರಾಮೇಗೌಡ ಮತ್ತು ಜಿಲ್ಲಾಧ್ಯಕ್ಷ ಶಂಭೂಗೌಡ ಹಾಗೂ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿದರು.
ನಂತರ ನಡೆದ ನೂತನ ಅಧ್ಯಕ್ಷ ಶಿವರಾಮೇಗೌಡರ ಅಭಿನಂದನಾ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಎನ್.ಜಯರಾಂ, ರಾಜ್ಯ ಪರಿಷತ್ ಸದಸ್ಯ ಮಂಜುನಾಥ್, ಪದ್ಮೇಶ್, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಡಿ.ರಮೇಶ್, ಎಸ್.ಕೆ.ರವಿಶಿವಕುಮಾರ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು…
ವರದಿ.ಕೆ.ಆರ್.ನೀಲಕಂಠ.
ಕೃಷ್ಣರಾಜಪೇಟೆ.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ