ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಕೆ.ಶಿವರಾಮೇಗೌಡ ಮತ್ತು ಪದಾಧಿಕಾರಿಗಳು ತಾಲೂಕು ದಂಡಾಧಿಕಾರಿ ಎಂ.ಶಿವಮೂರ್ತಿ ಅವರನ್ನು ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು ….
ರಾಜ್ಯ ಸರ್ಕಾರಿ ನೌಕರರು ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬದ್ಧತೆಯಿಂದ ಕೆಲಸ ಮಾಡುತ್ತಾ ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಂತಿದ್ದೇವೆ. ಆದ್ದರಿಂದ ರಾಜ್ಯ ಸರ್ಕಾರವು ನೌಕರರ ನ್ಯಾಯಬದ್ಧವಾದ ಬೇಡಿಕೆಗಳನ್ನು ಈಡೇರಿಸಿ ಸಹಾಯ ಮಾಡಬೇಕು ಎಂದು ನೌಕರರ ಸಂಘದ ಅಧ್ಯಕ್ಷರಾದ ಶಿವರಾಮೇಗೌಡರು
ತಹಶೀಲ್ದಾರ್ ಎಂ.ಶಿವಮೂರ್ತಿ ಅವರಲ್ಲಿ ಮನವಿ ಮಾಡಿದರು..
ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿದ ತಹಶೀಲ್ದಾರ್ ಎಂ.ಶಿವಮೂರ್ತಿ ಕೃಷ್ಣರಾಜಪೇಟೆ ತಾಲ್ಲೂಕಿನ ಸರ್ಕಾರಿ ನೌಕರರು ಬದ್ಧತೆಯಿಂದ ಜನಪರವಾಗಿ ಕೆಲಸ ಮಾಡುತ್ತಾ ಶೇ.೧೦೦ಕ್ಕೆ ೧೦೦ರಷ್ಟು ಯಶಸ್ವಿಯಾಗಿದ್ದಾರೆ. ಸಕಾಲ ಸೇವೆಯಲ್ಲಿಯೂ ತಾಲೂಕು ಮುಂಚೂಣಿಯಲ್ಲಿದೆ ಆದ್ದರಿಂದ ನೌಕರರ ಸಂಘಕ್ಕೆ ಹಾಗೂ ನೂತನ ಅಧ್ಯಕ್ಷರಿಗೆ ಧನ್ಯವಾದಗಳನ್ನು ಸಮರ್ಪಿಸುವುದಾಗಿ ತಿಳಿಸಿದರು …
ಈ ಸಂದರ್ಭದಲ್ಲಿ ನೌಕರರ ಸಂಘದ ಪದಾಧಿಕಾರಿಗಳಾದ ಪಿ.ಜೆ.ಕುಮಾರ್, ಆನಂದ್, ಎಸ್.ಇ.ಚೆನ್ನರಾಜು, ಡಿ.ರಮೇಶ್, ಎಸ್.ಕೆ.ರವಿಕುಮಾರ್, ಸಚಿವ ನಾರಾಯಣಗೌಡರ ಆಪ್ತಸಹಾಯಕರಾದ ದಯಾನಂದ ಮತ್ತಿತರರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ