ಮಂಡ್ಯ: ನಾಳಿನ ಕರ್ನಾಟಕ ಬಂದ್ ಗೆ ಕರವೇ ಶಿವರಾಮೇಗೌಡ ಬಣ, ಪಿ.ಎಫ್.ಐ, ಎಸ್.ಡಿ.ಪಿ.ಐ, ದಲಿತ ಸೇನೆ, ರಾಜ್ಯ ರೈತಸಂಘ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಸ್ವಯಂ ಪ್ರೇರಣೆಯಿಂದ ಕೆ.ಆರ್.ಪೇಟೆ ಬಂದ್ ನಲ್ಲಿ ಭಾಗವಹಿಸಿ ಬಂದ್ ಯಶಸ್ವಿಗೊಳಿಸಿಕೊಡಬೇಕೆಂದು ಕರವೇ ತಾಲೂಕು ಅಧ್ಯಕ್ಷ ಎ.ಸಿ.ಕಾಂತರಾಜು ಮನವಿ ಮಾಡಿದ್ದಾರೆ …
ಅವರು ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕನ್ನಡಿಗರ ಹಿತವನ್ನು ಕಡೆಗಣಿಸಿ ಮರಾಠಿ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರವು ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ ಕಾಂತರಾಜ್ ಮಾಜಿಸಚಿವ ಬಸನಗೌಡಪಾಟೀಲ್ ಯತ್ನಾಳ್ ಅವರು ಕನ್ನಡ ಪರಸಂಘಟನೆಗಳ ನಾಯಕರನ್ನು ಏಕವಚನದಲ್ಲಿ ನಿಂಧಿಸಿ ಅವಮಾನಿಸಿದ್ದಾರೆ. ಅವರು ಕನ್ನಡಪರ ಹೋರಾಟಗಾರರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು..ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪಾದದ ಧೂಳಿಗೂ ಸಮನಲ್ಲದ ಯತ್ನಾಳ್ ಬಹಿರಂಗವಾಗಿ ಕ್ಷಮೆಯಾಚಿಸದಿದ್ದರೆ ಬೆಳಗಾವಿಯಲ್ಲಿ ವಿಜಯಮೋರೆಗೆ ಮುಖಕ್ಕೆ ಮಸಿ ಬಳಿದಂತೆ ಯತ್ನಾಳ್ ಮುಖಕ್ಕೆ ಮಸಿ ಬಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು …
ವಕೀಲರಾದ ದೇವಾನಂದ್, ಕರವೇ ಜಿಲ್ಲಾ ಉಪಾಧ್ಯಕ್ಷ ಸಮೀರ್, ರೈತಸಂಘದ ಮುರುಗೇಶ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು..
ವರದಿ. ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ