May 12, 2024

Bhavana Tv

Its Your Channel

ತಾಲ್ಲೂಕು ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸಮಾಜಸೇವಕ, ಉದ್ಯಮಿ ಭಾರತೀಪುರ ಪುಟ್ಟಣ್ಣ ನೇಮಕ

ಮಂಡ್ಯ: ಕೆ.ಆರ್.ಪೇಟೆ ಪಟ್ಟಣದ ತಾಲ್ಲೂಕು ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸಮಾಜಸೇವಕ, ಉದ್ಯಮಿ ಭಾರತೀಪುರ ಪುಟ್ಟಣ್ಣ ನೇಮಕವಾಗಿದ್ದಾರೆ. ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಪುರ ಪುಟ್ಟಣ್ಣ ಅವರು ತಾಲೂಕು ಅಧ್ಯಕ್ಷ ಪರಮೇಶ್ ಅರವಿಂದ್ ಮತ್ತು ಓಬಿಸಿ ಘಟಕದ ಅಧ್ಯಕ್ಷರಾದ ಸಾರಂಗಿ ನಾಗರಾಜು ಪಕ್ಷದ ಬಾವುಟವನ್ನು ನೀಡಿ ಶಲ್ಯವನ್ನು ಹಾಕಿ ಅಭಿನಂದಿಸಿ ಗೌರವಿಸಿ ಗ್ರಾಮ ಪಂಚಾಯತಿ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಪರಮೇಶ್ ಅರವಿಂದ್ ಮನವಿ ಮಾಡಿದರು.

ಬಿಜೆಪಿ ಕಛೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾರತೀಪುರ ಮತ್ತು ಕೊರಟಿಕೆರೆ ಗ್ರಾಮಗಳ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು..

ಇದೇ ಡಿಸೆಂಬರ್ ೨೭ರಂದು ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ ಸಚಿವರಾದ ಡಾ.ನಾರಾಯಣಗೌಡರ ಕೈಬಲಪಡಿಸುವುದಾಗಿ ಘೋಷಿಸಿದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: