ಮಂಡ್ಯ(ಡಿ.೨೬): ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಿ ಕಾಲೇಜಿನಲ್ಲಿ ಬದ್ಧತೆಯಿಂದ ಕಾರ್ಯ ನಿರ್ಹಿವಸುವಂತೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರು ತಿಳಿಸಿದರು
ಇಂದು ಅವರ ಗೃಹ ಕಚೇರಿ ಯಲ್ಲಿ ತಾಲ್ಲೂಕಿನ ನೂತನ ಪ್ರಾಂಶುಪಾಲರೊAದಿಗೆ ಕಾಲೇಜುಗಳ ಅಭಿವೃದ್ಧಿ ಬಗ್ಗೆ ಚರ್ಚಿಸಿ ಮಾತನಾಡಿದರು…
ಕೊರೋನಾ ಹಿನ್ನೆಲೆಯಲ್ಲಿ ಪಾಠ ಪ್ರವಚನಗಳ ಬೋಧನೆಗೆ ತೊಂದರೆಯಾಗಿದೆ. ನಿಮ್ಮ ನಿಮ್ಮ ಕಾಲೇಜಿನ ವ್ಯಾಪ್ತಿಯ ಸಮಸ್ಯೆಗಳನ್ನು ತಿಳಿಸಿದರೆ ಅದಕ್ಕೆ ಪರಿಹಾರ ದೊರಕಿಸಿಕೊಡುವ ಜೊತೆಗೆ ಸೂಕ್ತ ನೆರವನ್ನು ನೀಡುವುದಾಗಿ ಸಚಿವರು ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿಯೇ ಮಾದರಿಯಾಗಿ ಕೃಷ್ಣರಾಜಪೇಟೆ ತಾಲೂಕಿನಲ್ಲಿ ಪದವಿಪೂರ್ವ ಕಾಲೇಜುಗಳಿಂದ ಉತ್ತಮ ಫಲಿತಾಂಶ ತರಲು ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು.
ನೂತನ ಪ್ರಾಂಶುಪಾಲರಾದ ಮೋಹನ್, ಆನಂದ್, ಶಾಂತರಾಜು, ಮಲ್ಲಿಕಾರ್ಜುನ್, ಲಿಂಗರಾಜು, ಕೆಂಪರಾಜು, ಚಿನ್ನಮ್ಮ ಮತ್ತಿತರರು ಹಾಜರಿದ್ದರು.
ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ