March 24, 2024

Bhavana Tv

Its Your Channel

೨೦೨೧ನೇ ಸಾಲಿನ ಕರ್ನಾಟಕ ದರ್ಶನ ಕ್ಯಾಲೆಂಡರ್ ಬಿಡುಗಡೆ

ಮಂಡ್ಯ(ಜ.೨): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಡಾ. ಪಿ.ಗಂಗಾಧರರೈ ಅವರಿಂದ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ವರದಿಗಾರರ ಸಂಘದ ೨೦೨೧ನೇ ಸಾಲಿನ ಕರ್ನಾಟಕ ದರ್ಶನ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಕರ್ನಾಟಕ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳು ಹಾಗೂ ಪ್ರವಾಸಿತಾಣಗಳ ಚಿತ್ರಗಳನ್ನು ಒಳಗೊಂಡಿರುವ ಕರ್ನಾಟಕ ದರ್ಶನ ಕ್ಯಾಲೆಂಡರ್ ಬಹಳ ಸುಂದರವಾಗಿ ಮೂಡಿ ಬಂದಿದೆ ಎಂದು ಶ್ಲಾಘಿಸಿದ ಗಂಗಾಧರರೈ ಅವರು ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ವರದಿಗಾರರ ಸಂಘದ ಕಾರ್ಯದಕ್ಷತೆ ಹಾಗೂ ಸಮಾಜಮುಖಿ ಕಾಳಜಿಯನ್ನು ಪ್ರಶಂಸಿಸಿದರು…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಪರ ಕಾರ್ಯಕ್ರಮಗಳ ವರದಿಯನ್ನು ಪ್ರಾಮಾಣಿಕವಾಗಿ ಪ್ರಕಟಿಸಿ ಯೋಜನೆಯ ಫಲವನ್ನು ಶ್ರೀಸಾಮಾನ್ಯನಿಗೆ ತಲುಪಿಸುವ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡುತ್ತಿರುವ ಸಂಘವು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸಂಘದ ರಾಜ್ಯಾಧ್ಯಕ್ಷರಾದ ಕೆ.ಆರ್.ನೀಲಕಂಠ ಮತ್ತು ಪದಾಧಿಕಾರಿಗಳ ತಂಡಕ್ಕೆ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಗಂಗಾಧರರೈ ತಿಳಿಸಿದರು …

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂಡ್ಯ ಜಿಲ್ಲಾ ನಿರ್ದೇಶಕರಾದ ಸದಾನಂದಬAಗೇರ, ಕೃಷ್ಣರಾಜಪೇಟೆ ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಸೇರಿದಂತೆ ನೂರಾರು ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: