ಮಂಡ್ಯ: ನಾಗಮಂಗಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕಿನ ಶಾಸಕ ಸುರೇಶ್ ಗೌಡ ನಿಷ್ಕ್ರಿಯ ಕಾರ್ಯವೈಖರಿ ಕುರಿತು ಇಂದು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಶಾಸಕರ ವಿರುದ್ಧ ಘೋಷಣೆ ಕೂಗಿದರು
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹಾಗೂ ತಹಸೀಲ್ದಾರ್ ಕುಂಞ ಅಹಮದ್ ಅವರಿಗೆ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಮನವಿ ಪತ್ರ ಸಲ್ಲಿಸಲಾಯಿತು
ಮಾರ್ಕೋನಹಳ್ಳಿ ಗ್ರಾಮದಿಂದ ೧೨೮ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ಸ್ಥಗಿತಗೊಂಡಿರುವುದು ನಾಗಮಂಗಲ ಶ್ರಾವಣಬೆಳಗೊಳ ಮುಖ್ಯ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದು ಬಿಂಡಿಗನವಿಲೆ ಹೋಬಳಿ ಕದಬಹಳ್ಳಿ ಗ್ರಾಮದಿಂದ ಶಿಖರಹಳ್ಳಿ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದು ಹಾಗೂ ಬಿಂಡಿಗನವಿಲೆ ಹೋಬಳಿಯ ಗ್ರಾಮಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಹಿಂದಿನ ಶಾಸಕರು ಅನುಮೋದೆ ಯಾಗಿದ್ದರು ಕಾರ್ಯರೂಪಕ್ಕೆ ತರದೆ ಕಾಮಗಾರಿ ಸ್ಥಗಿತಗೊಂಡಿರುವುದು
ಪಾಲಅಗ್ರಹಾರ ದಿಂದ ಕೋಟೆ ಬೆಟ್ಟ ರಸ್ತೆ ಕಳಪೆ ಕಾಮಗಾರಿ .ರೈತರ ಬೆಳೆಗಳಿಗೆ ವಿದ್ಯುತ್ ಸಂಪರ್ಕ ಕೊರತೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ಶಾಸಕರು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ ವಹಿಸಿರುವುದರ ಕುರಿತು ಎಂದು ಪ್ರತಿಭಟನೆ ನಡೆಸಲಾಯಿತು
ಪ್ರತಿಭಟನೆಯಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು ಹಾಗೂ ತಾಲೂಕು ಮಟ್ಟದ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ