ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಎಸ್.ಎಲ್ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಆಯೋಜನೆ, ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಶ್ರೀನಿವಾಸ್ ಮತ್ತು ಕೀಲುಮೂಳೆ ರೋಗತಜ್ಞ ವೈದ್ಯರಾದ ಡಾ.ಮನೋಹರ್ ಮತ್ತು ಕಿಡ್ನಿ ಸಮಸ್ಯೆ ನಿರ್ಮೂಲನಾ ತಜ್ಞವೈದ್ಯ ಡಾ.ನಾಗೇಶ್ ಅವರಿಂದ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಶಿಬಿರ ನಡೆಯಿತು.
ಮುಖ್ಯಾಧಿಕಾರಿ ಸತೀಶ್ ಕುಮಾರ್, ಪರಿಸರ ಎಂಜಿನಿಯರ್ ಅರ್ಚನಾ ಆರಾಧ್ಯ ಮತ್ತು ಆರೋಗ್ಯ ಪರಿವೀಕ್ಷಕರಾದ ಅಶೋಕ್ ಅವರ ನೇತೃತ್ವದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ.
ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಸದಾ ಅಪಾಯದಲ್ಲಿಯೇ ಕೆಲಸ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಗಳಾದ ಪೌರಕಾರ್ಮಿಕರ ಆರೋಗ್ಯ ಕಾಪಾಡಲು ಪುರಸಭೆಯ ಆಡಳಿತ ಮಂಡಳಿಯು ಬದ್ಧವಾಗಿದೆ ಎಂದು ತಿಳಿಸಿದ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮೈಸೂರು ಬೆಂಗಳೂರು ನಗರಗಳಲ್ಲಿ ದೊರೆಯುವಂತಹ ಗುಣಮಟ್ಟದ ಚಿಕಿತ್ಸೆಯನ್ನು ನೀಡಲು ಕೆ.ಆರ್.ಪೇಟೆ ಪುರಸಭೆಯು ಬದ್ಧವಾಗಿದೆ ಎಂದು ತಿಳಿಸಿದರು..
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ.ಎಸ್.ಪ್ರಮೋದ್, ಡಿ.ಪ್ರೇಮಕುಮಾರ್, ಗಿರೀಶ್, ಶಾಮಿಯಾನ ತಿಮ್ಮೇಗೌಡ ಸೇರಿದಂತೆ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ಮಂಟೇಮAಜು, ಮೇಸ್ತ್ರಿ ಮುತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು…
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ