ಮಂಡ್ಯ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣದಲ್ಲಿರುವ ಕವಿ, ಪತ್ರಕರ್ತ, ಸಂಘಟಕ, ಕನ್ನಡದ ಪರಿಚಾರಕ ಕೃಷ್ಣಸ್ವರ್ಣಸಂದ್ರ ಬೆಂಬಲಿಸಿ ವಿಜಯಮಾಲೆ ತೊಡಿಸಲು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಮನವಿ ಮಾಡಿದ್ದಾರೆ,
ಕೆ.ಆರ್.ಪೇಟೆ ಪಟ್ಟಣದ ತಮ್ಮ ನಿವಾಸಕ್ಕೆ ಮತಯಾಚನೆ ನಡೆಸಲು ಆಗಮಿಸಿದ ಕಸಾಪ ಅಭ್ಯರ್ಥಿ ಕೃಷ್ಣಸ್ವರ್ಣಸಂದ್ರ ಅವರಿಗೆ ಗೆದ್ದು ಬರುವಂತೆ ಆಶೀರ್ವದಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕನ್ನಡ ಪರವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು. ಕಳೆದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿ ಸೋಲಿನ ಕಹಿಯನ್ನು ಉಂಡಿದ್ದರೂ ನಿರಂತರವಾಗಿ ಸಾಹಿತ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕೆಲಸ ಮಾಡಿರುವ ಕವಿಮಿತ್ರರಾದ ಕೃಷ್ಣಸ್ವರ್ಣಸಂದ್ರ ಅವರಿಗೆ ಜಿಲ್ಲೆಯ ಪ್ರಜ್ಞಾವಂತ ಸಾಹಿತ್ಯಾಭಿಮಾನಿಗಳು ಒಂದು ಅವಕಾಶ ಮಾಡಿಕೊಡಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು..
ಈ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷರಾದ ಕೆ.ಎಸ್.ಸೋಮಶೇಖರ್, ಕೆ.ಕಾಳೇಗೌಡ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ಗೌರವಾಧ್ಯಕ್ಷ ಪದ್ಮೇಶ್, ಯುವಮುಖಂಡರಾದ ಟಿ.ವೈ.ಆನಂದ, ಮೋಹನರಾಜ್, ಬಿ.ಪಿ.ಪ್ರಕಾಶ್, ಎ.ಪಿ.ಕೇಶವ, ಅಪ್ಪನಹಳ್ಳಿ ಅರುಣ ಸೇರಿದಂತೆ ಕಸಾಪ ಆಜೀವ ಸದಸ್ಯರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ