ಮOಡ್ಯ: ಕೃಷ್ಣರಾಜಪೇಟೆ ಪುರಸಭೆ ವ್ಯಾಪ್ತಿಯ ಜಯನಗರ ಬಡಾವಣೆಯಲ್ಲಿ ೧೨ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರು ಮನೆಗಳನ್ನು ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ನೇತೃತ್ವದಲ್ಲಿ ಪುರಸಭೆಯ ಸಿಬ್ಬಂಧಿಗಳು ಸೀಲ್ ಡೌನ್ ಮಾಡಿದರು…
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಾಲುರವಿ ದಂಪತಿಗಳು, ನಿವೃತ್ತ ಶಿಕ್ಷಕ ಮಹದೇವಪ್ಪ ಸೇರಿದಂತೆ ೧೨ ಜನರಿಗೆ ಕೊರೋನಾ ಸೋಂಕು ತಗುಲಿದ್ದು ಜಯನಗರ ಬಡಾವಣೆಯ ಆರು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಹೋಮ್ ಐಸೊಲೇಷನ್ ಆಗಿರುವವರು ಮನೆಯೊಳಗೆ ಇದ್ದುಕೊಂಡು ವೈದ್ಯಕೀಯ ಚಿಕಿತ್ಸೆಯನ್ನು ಪಡೆದುಕೊಂಡು ಗುಣಮುಖರಾಗಬೇಕು. ಸೀಲ್ ಡೌನ್ ಮಾಡಿರುವ ಮನೆಯಲ್ಲಿರುವವರು ಮನೆಯಿಂದ ಹೊರಬಂದು ಎಲ್ಲೆಂದರಲ್ಲಿ ಅಡ್ಡಾಡಿ ಸೋಂಕನ್ನು ಇತರರಿಗೆ ಹರಡದೇ ಮನೆಯಲ್ಲೇ ಇರಬೇಕು. ಅಗತ್ಯ ವಸ್ತುಗಳು ಹಾಗೂ ಔಷಧಗಳು ಬೇಕಾದರೆ ಪುರಸಭಾ ಕಾರ್ಯಾಲಯಕ್ಕೆ ಇಲ್ಲವೇ ಆರೋಗ್ಯ ಪರಿವೀಕ್ಷಕರಿಗೆ ಕರೆ ಮಾಡಿ ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು..
ಮನೆಗಳನ್ನು ಸೀಲ್ ಡೌನ್ ಮಾಡುವ ಸಂದರ್ಭದಲ್ಲಿ ಪುರಸಭೆಯ ವ್ಯವಸ್ಥಾಪಕ ಸೋಮಶೇಖರ್, ಪರಿಸರ ಎಂಜಿನಿಯರ್ ಅರ್ಚನಾ ಆರಾಧ್ಯ, ಕಂದಾಯಾಧಿಕಾರಿ ರವಿಕುಮಾರ್, ರಾಜು, ಆರೋಗ್ಯಪರಿವೀಕ್ಷಕ ಅಶೋಕ್, ಸ್ವರ್ಣಜಯಂತಿ ಶಹರಿರೋಜ್ಗಾರ್ ಯೋಜನಾಧಿಕಾರಿ ಭಾರತಿ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಂಟೆಮAಜು, ಮೇಸ್ತ್ರಿ ಮುತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು..
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ