ನಾಗಮಂಗಲ: ಜೆಡಿಎಸ್ ಶಾಸಕ ಸುರೇಶ್ ಗೌಡ ಪಿಪಿಇ ಕಿಟ್ ಧರಿಸಿ ಕೋವಿಡ್ ಸೆಂಟರ್ಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸುವ ಜೊತೆಗೆ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ ಕುರಿತಾಗಿ ಸೋಂಕಿತರಿAದ ಮಾಹಿತಿ ಪಡೆದರು,
ನಂತರ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ತಾಕೀತು ಮಾಡಿದರು.
ಕಾಲ್ನಡಿಗೆಯಲ್ಲಿ ಪಟ್ಟಣ ರೌಂಡ್ಸ್ ಮಾಡಿದ ಶಾಸಕ :- ಪಟ್ಟಣದಲ್ಲಿನ ಖಾಸಗಿ ಕ್ಲಿನಿಕ್ ಹಾಗೂ ಮೆಡಿಕಲ್ ಗಳನ್ನು ಪರಿಶೀಲನೆ ನಡೆಸಿದ ಶಾಸಕ ಸಾಮಾಜಿಕ ಅಂತರ ಕಾಪಾಡಿ ವ್ಯಾಪಾರ ಮಾಡುವಂತೆ ಎಚ್ಚರಿಕೆ ನೀಡಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅನಗತ್ಯವಾಗಿ ಸಂಚರಿಸುವವರ ವಿರುದ್ದ ಕ್ರಮ ಜರುಗಿಸುವಂತೆ ಪೋಲಿಸರಿಗೆ ತಾಕೀತು ಮಾಡಿದರು.
ವರದಿ ಚಂದ್ರಮೌಳಿ. ನಾಗಮಂಗಲ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ