May 4, 2024

Bhavana Tv

Its Your Channel

ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಸ್ಥಾಪಿಸಿರುವ ಕೋವಿಡ್ ಸ್ವಾಬ್ ಪರೀಕ್ಷಾ ಕೇಂದ್ರಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಭೇಟಿ…

ಸಾರ್ವಜನಿಕರಿಗೆ ಹಾಗೂ ಸೋಂಕಿತರಿಗೆ ಬಿಜೆಪಿ ಪಕ್ಷದ ವತಿಯಿಂದ ನೀಡುತ್ತಿರುವ ಔಷಧಗಳ ಮೆಡಿಕಲ್ ಕಿಟ್, ಮಾಸ್ಕ್, ಸ್ಯಾನಿಟೈಸರ್ ಬಾಟಲುಗಳನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್ ಮತ್ತು ತಾಲ್ಲೂಕು ಅಧ್ಯಕ್ಷ ಪರಮೇಶ್ ಅರವಿಂದ್ ನೇತೃತ್ವದಲ್ಲಿ ವಿತರಿಸಿದರು

ಕೋವಿಡ್ ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಾಗಿ ಗುಣಮಟ್ಟದ ಚಿಕಿತ್ಸೆಯನ್ನು ಪಡೆದುಕೊಂಡು ಶೀಘ್ರ ಗುಣಮುಖರಾಗಿ ಮನೆಗೆ ಮರಳುವಂತೆ ಮನವಿ ಮಾಡಿದರು…

ಕೊರೋನಾ ೨ನೇ ಅಲೆಯ ಸೋಂಕಿನ ಬಗ್ಗೆ ಭಯ ಬೇಡ, ಕೋವಿಡ್ ಸೋಂಕಿತರು ಆತ್ಮವಿಶ್ವಾಸದಿಂದ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಸಂತೋಷದಿAದ ಜೀವನ ನಡೆಸಬೇಕು.. ಕೋವಿಡ್ ಮಹಾಮಾರಿಯ ವಿರುದ್ಧದ ಯುದ್ಧವನ್ನು ಗೆದ್ದು ಆತ್ಮವಿಶ್ವಾಸದಿಂದ ಜೀವನ ನಡೆಸಬೇಕು ಎಂದು ಮನವಿ ಮಾಡಿದರು…

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಂ.ಎಸ್.ಜಯAತ್, ಸರ್ಕಲ್ ಇನ್ಸ್ಪೆಕ್ಟರ್ ಎಂ.ಕೆ.ದೀಪಕ್, ಸಬ್ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ, ಸಚಿವರ ಆಪ್ತಸಹಾಯಕರಾದ ದಯಾನಂದ, ಕಿಕ್ಕೇರಿ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಧುಸೂದನ್ ಸೇರಿದಂತೆ ಆಶಾ, ಆರೋಗ್ಯ ಕಾರ್ಯಕರ್ತೆಯರು ಸಚಿವರು ನೀಡಿದ ಬಿಜೆಪಿ ಪಕ್ಷದ ವತಿಯಿಂದ ಕೊಡುಗೆಯಾಗಿ ನೀಡಿದ ಮೆಡಿಕಲ್ ಕಿಟ್ ಗಳನ್ನು ವಿತರಿಸಿದರು..

ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ . ಮಂಡ್ಯ

error: